<p><strong>ಬೆಂಗಳೂರು: </strong>ರಾಜ್ಯದಲ್ಲಿ ಇಂದು ಹೊಸದಾಗಿ 10,947 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು,113 ಜನರು ಮೃತಪಟ್ಟಿದ್ದಾರೆ.ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 6,68,652ಕ್ಕೆ ಏರಿಕೆಯಾಗಿದೆ. ಒಟ್ಟಾರೆ 9,574 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<p>ಈವರೆಗೆ 5,42,906 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 1,16,153 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 847 ಜನರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಗುಣಮುಖರಾಗಿ 9,832 ಜನರು ಬಿಡುಗಡೆಯಾಗಿದ್ದಾರೆ.</p>.<p>ಬೆಂಗಳೂರಿನಲ್ಲಿ ಇಂದು ಹೊಸದಾಗಿ 5,000 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 2,00,426 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 2.62 ಲಕ್ಷದ ಗಡಿ ದಾಟಿದೆ. ಇಂದು 55 ಜನರು ಮೃತಪಟ್ಟಿದ್ದು, ಈವರೆಗೂ 3,190 ಮಂದಿ ಸಾವಿಗೀಡಾಗಿದ್ದಾರೆ.</p>.<p>ಬಾಗಲಕೋಟೆಯಲ್ಲಿ 121, ಬಳ್ಳಾರಿ 258, ಬೆಳಗಾವಿ 186, ಬೆಂಗಳೂರು ಗ್ರಾಮಾಂತರ 189, ಬೀದರ್ 57, ಚಾಮರಾಜನಗರ 104, ಚಿಕ್ಕಬಳ್ಳಾಪುರ 115, ಚಿಕ್ಕಮಗಳೂರು 186, ಚಿತ್ರದುರ್ಗ 217, ದಕ್ಷಿಣ ಕನ್ನಡ 447, ದಾವಣಗೆರೆ 141, ಧಾರವಾಡ 154, ಗದಗ 72, ಹಾಸನ 471, ಹಾವೇರಿ 57, ಕಲಬುರಗಿ 180, ಕೊಡಗು 103, ಕೋಲಾರ 104, ಕೊಪ್ಪಳ 98, ಮಂಡ್ಯ 207, ಮೈಸೂರು 979, ರಾಯಚೂರು 129, ರಾಮನಗರ 77, ಶಿವಮೊಗ್ಗ 203, ತುಮಕೂರು 250, ಉಡುಪಿ 209, ಉತ್ತರ ಕನ್ನಡ 462, ವಿಜಯಪುರ 73 ಮತ್ತು ಯಾದಗಿರಿಯಲ್ಲಿ 98 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಇಂದು ಹೊಸದಾಗಿ 10,947 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು,113 ಜನರು ಮೃತಪಟ್ಟಿದ್ದಾರೆ.ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 6,68,652ಕ್ಕೆ ಏರಿಕೆಯಾಗಿದೆ. ಒಟ್ಟಾರೆ 9,574 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<p>ಈವರೆಗೆ 5,42,906 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 1,16,153 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 847 ಜನರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಗುಣಮುಖರಾಗಿ 9,832 ಜನರು ಬಿಡುಗಡೆಯಾಗಿದ್ದಾರೆ.</p>.<p>ಬೆಂಗಳೂರಿನಲ್ಲಿ ಇಂದು ಹೊಸದಾಗಿ 5,000 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 2,00,426 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 2.62 ಲಕ್ಷದ ಗಡಿ ದಾಟಿದೆ. ಇಂದು 55 ಜನರು ಮೃತಪಟ್ಟಿದ್ದು, ಈವರೆಗೂ 3,190 ಮಂದಿ ಸಾವಿಗೀಡಾಗಿದ್ದಾರೆ.</p>.<p>ಬಾಗಲಕೋಟೆಯಲ್ಲಿ 121, ಬಳ್ಳಾರಿ 258, ಬೆಳಗಾವಿ 186, ಬೆಂಗಳೂರು ಗ್ರಾಮಾಂತರ 189, ಬೀದರ್ 57, ಚಾಮರಾಜನಗರ 104, ಚಿಕ್ಕಬಳ್ಳಾಪುರ 115, ಚಿಕ್ಕಮಗಳೂರು 186, ಚಿತ್ರದುರ್ಗ 217, ದಕ್ಷಿಣ ಕನ್ನಡ 447, ದಾವಣಗೆರೆ 141, ಧಾರವಾಡ 154, ಗದಗ 72, ಹಾಸನ 471, ಹಾವೇರಿ 57, ಕಲಬುರಗಿ 180, ಕೊಡಗು 103, ಕೋಲಾರ 104, ಕೊಪ್ಪಳ 98, ಮಂಡ್ಯ 207, ಮೈಸೂರು 979, ರಾಯಚೂರು 129, ರಾಮನಗರ 77, ಶಿವಮೊಗ್ಗ 203, ತುಮಕೂರು 250, ಉಡುಪಿ 209, ಉತ್ತರ ಕನ್ನಡ 462, ವಿಜಯಪುರ 73 ಮತ್ತು ಯಾದಗಿರಿಯಲ್ಲಿ 98 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>