Covid-19 Karnataka Update | 5,872 ಹೊಸ ಪ್ರಕರಣ, ಯಾವ ಜಿಲ್ಲೆಯಲ್ಲೆಷ್ಟು?

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 5,872 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ಪತ್ತೆಯಾಗಿದ್ದು, 88 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 7,82,773ಕ್ಕೆ ಏರಿಕೆಯಾಗಿದೆ. ಒಟ್ಟಾರೆ 10,696 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಈವರೆಗೆ 6,71,618 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 1,00,440 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 947 ಜನರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಗುಣಮುಖರಾಗಿ 9,289 ಜನರು ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಇಂದು ಹೊಸದಾಗಿ 2,717 ಜನರಿಗೆ ಸೋಂಕು ತಗುಲಿದ್ದು, ಒಟ್ಟಾರೆ 2,48,584 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 3.15 ಲಕ್ಷದ ಗಡಿ ದಾಟಿದೆ. ಇಂದು 53 ಜನರು ಮೃತಪಟ್ಟಿದ್ದು, ಈವರೆಗೂ 3,631 ಮಂದಿ ಸಾವಿಗೀಡಾಗಿದ್ದಾರೆ.
ಬಾಗಲಕೋಟೆಯಲ್ಲಿ 114, ಬಳ್ಳಾರಿ 145, ಬೆಳಗಾವಿ 65, ಬೆಂಗಳೂರು ಗ್ರಾಮಾಂತರ 366, ಬೀದರ್ 14, ಚಾಮರಾಜನಗರ 33, ಚಿಕ್ಕಬಳ್ಳಾಪುರ 116, ಚಿಕ್ಕಮಗಳೂರು 173, ಚಿತ್ರದುರ್ಗ 74, ದಕ್ಷಿಣ ಕನ್ನಡ 215, ದಾವಣಗೆರೆ 304, ಧಾರವಾಡ 134, ಗದಗ 40, ಹಾಸನ 140, ಹಾವೇರಿ 23, ಕಲಬುರಗಿ 83, ಕೊಡಗು 51, ಕೋಲಾರ 49, ಕೊಪ್ಪಳ 52, ಮಂಡ್ಯ 208, ಮೈಸೂರು 220, ರಾಯಚೂರು 33, ರಾಮನಗರ 23, ಶಿವಮೊಗ್ಗ 177, ತುಮಕೂರು 143, ಉಡುಪಿ 117, ಉತ್ತರ ಕನ್ನಡ 74, ವಿಜಯಪುರ 38 ಮತ್ತು ಯಾದಗಿರಿಯಲ್ಲಿ 31 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.