ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ಒಂದೇ ದಿನ 10,106 ಮಂದಿ ಗುಣಮುಖ

Last Updated 25 ಅಕ್ಟೋಬರ್ 2020, 13:34 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 10,106 ಮಂದಿ ಕೋವಿಡ್‌ ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಇಂದು ರಾಜ್ಯದಲ್ಲಿ 4,439 ಹೊಸ ಕೋವಿಡ್‌ ಪ್ರಕರಣ ದೃಢಪಟ್ಟಿದ್ದು, 32 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 8,02,817ಕ್ಕೆ ಏರಿಕೆಯಾಗಿದೆ. ಆ ಪೈಕೆ 10,905 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 7,10,843 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 81,050 ಸಕ್ರಿಯ ಪ್ರಕರಣಗಳಿದ್ದು, 939 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 2468 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 20 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ 234, ತುಮಕೂರು 141, ಮೈಸೂರು 140, ದಕ್ಷಿಣ ಕನ್ನಡ 139, ಬಳ್ಳಾರಿ 132, ಉಡುಪಿ ಜಿಲ್ಲೆಯಲ್ಲಿ 117 ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT