ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸ 6,974 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ 83 ಜನರು ಮೃತಪಟ್ಟಿದ್ದಾರೆ.ಒಟ್ಟಾರೆ ಸೋಂಕಿತರ ಸಂಖ್ಯೆ 5,33,850ಕ್ಕೆ ಏರಿಕೆಯಾಗಿದೆ. ಒಟ್ಟಾರೆ 8,228 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು 9,073 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದರೆ, ಈವರೆಗೆ 4,32,450 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 93,153 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 822 ಜನರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದ ಕೋವಿಡ್-19 ಹಾಟ್ಸ್ಪಾಟ್ ಆಗಿರುವ ಬೆಂಗಳೂರಿನಲ್ಲೇ ಇಂದು ಹೊಸದಾಗಿ 3,082 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 2 ಲಕ್ಷ ದ ಗಡಿ ದಾಟಿದೆ. ಒಟ್ಟಾರೆ 1,58,029 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು 26 ಜನರು ಮೃತಪಟ್ಟಿದ್ದು, ಈವರೆಗೂ 2,715 ಮಂದಿ ಸಾವಿಗೀಡಾಗಿದ್ದಾರೆ.
ಇಂದಿನ 22/09/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@CMofKarnataka @BSYBJP @DVSadanandGowda @SureshAngadi_ @MoHFW_INDIA @UNDP_India @WHOSEARO @UNICEFIndia @sriramulubjp @drashwathcn @BSBommaihttps://t.co/I1RqpRF91s pic.twitter.com/MYsC0BIXwO
— K'taka Health Dept (@DHFWKA) September 22, 2020
ರಾಜ್ಯದ ಬಾಗಲಕೋಟೆ ಜಿಲ್ಲೆಯಲ್ಲಿ 77, ಬಳ್ಳಾರಿ 181, ಬೆಳಗಾವಿ 179, ಬೆಂಗಳೂರು ಗ್ರಾಮಾಂತರ 80, ಬೀದರ್ 50, ಚಾಮರಾಜನಗರ 57, ಚಿಕ್ಕಬಳ್ಳಾಪುರ 71, ಚಿಕ್ಕಮಗಳೂರು 77, ದಕ್ಷಿಣ ಕನ್ನಡ 211, ದಾವಣಗೆರೆ 198, ಧಾರವಾಡ 37, ಗದಗ 134, ಹಾಸನ 235, ಹಾವೇರಿ 115, ಕಲಬುರಗಿ 168, ಕೊಡಗು 73, ಕೋಲಾರ 52, ಕೊಪ್ಪಳ 180, ಮಂಡ್ಯ 134, ಮೈಸೂರು 443, ರಾಯಚೂರು 115, ರಾಮನಗರ 33, ಶಿವಮೊಗ್ಗ 234, ತುಮಕೂರು 240, ಉಡುಪಿ 106, ಉತ್ತರ ಕನ್ನಡ 155, ವಿಜಯಪುರ 80 ಮತ್ತು ಯಾದಗಿರಿಯಲ್ಲಿ 55 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.
ಒಟ್ಟಾರೆ ಸೋಂಕಿತರ ಪೈಕಿ 30,751 ಸೋಂಕಿತರೊಂದಿಗೆ ಮೈಸೂರು ಮೊದಲ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿರುವ ಬಳ್ಳಾರಿಯಲ್ಲಿ ಒಟ್ಟಾರೆ 29,460. ದಕ್ಷಿಣ ಕನ್ನಡದಲ್ಲಿ ಈವರೆಗೆ 20,578 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಮೂರನೇ ಸ್ಥಾನದಲ್ಲಿದೆ. ನಾಲ್ಕನೇ ಸ್ಥಾನದಲ್ಲಿ 18,160 ಪ್ರಕರಣಗಳೊಂದಿಗೆ ಬೆಳಗಾವಿ ಜಿಲ್ಲೆಯಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.