ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update | ರಾಜ್ಯದಲ್ಲಿ 5,460 ಜನ ಗುಣಮುಖ, 38 ಜನರು ಸಾವು

Last Updated 23 ಸೆಪ್ಟೆಂಬರ್ 2020, 15:53 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸ 6,997 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಈ ಅವಧಿಯಲ್ಲಿ 38 ಜನರು ಮೃತಪಟ್ಟಿದ್ದಾರೆ.ಒಟ್ಟಾರೆ ಸೋಂಕಿತರ ಸಂಖ್ಯೆ 5,40,847ಕ್ಕೆ ಏರಿಕೆಯಾಗಿದೆ. ಒಟ್ಟಾರೆ 8,266 ಜನರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು 5,460 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದರೆ, ಈವರೆಗೆ 4,37,910 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 94,652 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಇದರಲ್ಲಿ 816 ಜನರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದ ಕೋವಿಡ್-19 ಹಾಟ್‌ಸ್ಪಾಟ್ ಆಗಿರುವ ಬೆಂಗಳೂರಿನಲ್ಲೇ ಇಂದು ಹೊಸದಾಗಿ 3,547 ಜನರಿಗೆ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,04,275ಕ್ಕೆ ತಲುಪಿದೆ. ಒಟ್ಟಾರೆ 1,61,565 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು 23 ಜನರು ಮೃತಪಟ್ಟಿದ್ದು, ಈವರೆಗೂ 2,738 ಮಂದಿ ಸಾವಿಗೀಡಾಗಿದ್ದಾರೆ.

ಬಾಗಲಕೋಟೆ ಜಿಲ್ಲೆಯಲ್ಲಿ 50, ಬಳ್ಳಾರಿ 192, ಬೆಳಗಾವಿ 191, ಬೆಂಗಳೂರು ಗ್ರಾಮಾಂತರ 128, ಬೀದರ್ 63, ಚಾಮರಾಜನಗರ 32, ಚಿಕ್ಕಬಳ್ಳಾಪುರ 84, ಚಿಕ್ಕಮಗಳೂರು 252, ದಕ್ಷಿಣ ಕನ್ನಡ 186, ದಾವಣಗೆರೆ 138, ಧಾರವಾಡ 120, ಗದಗ 59, ಹಾಸನ 315, ಹಾವೇರಿ 32, ಕಲಬುರಗಿ 100, ಕೊಡಗು 33, ಕೋಲಾರ 44, ಕೊಪ್ಪಳ 88, ಮಂಡ್ಯ 203, ಮೈಸೂರು 341, ರಾಯಚೂರು 37, ರಾಮನಗರ 57, ಶಿವಮೊಗ್ಗ 187, ತುಮಕೂರು 90, ಉಡುಪಿ 102, ಉತ್ತರ ಕನ್ನಡ 115, ವಿಜಯಪುರ 82 ಮತ್ತು ಯಾದಗಿರಿಯಲ್ಲಿ 40 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಹೊಸ ಪ್ರಕರಣಗಳು ಪತ್ತೆಯಾಗಿದೆ.

ಒಟ್ಟಾರೆ ಸೋಂಕಿತರ ಪೈಕಿ 31,192 ಸೋಂಕಿತರೊಂದಿಗೆ ಮೈಸೂರು ಮೊದಲ ಸ್ಥಾನದಲ್ಲಿದ್ದರೆ, ಎರಡನೇ ಸ್ಥಾನದಲ್ಲಿರುವ ಬಳ್ಳಾರಿಯಲ್ಲಿ ಒಟ್ಟಾರೆ 29,652. ದಕ್ಷಿಣ ಕನ್ನಡದಲ್ಲಿ ಈವರೆಗೆ 20,764 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಮೂರನೇ ಸ್ಥಾನದಲ್ಲಿದೆ. ನಾಲ್ಕನೇ ಸ್ಥಾನದಲ್ಲಿ 18,351 ಪ್ರಕರಣಗಳೊಂದಿಗೆ ಬೆಳಗಾವಿ ಜಿಲ್ಲೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT