<p><strong>ಬೆಂಗಳೂರು:</strong>ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪೀಡಿತರ ಪೈಕಿ ಸೋಮವಾರ 20 ಮಂದಿ ಅಸುನೀಗಿದ್ದಾರೆ. ಈವರೆಗೆ37,746 ಜನ ಮೃತರಾಗಿದ್ದು, ಮರಣ ಪ್ರಮಾಣ ದರವು ಶೇ 3.96ಕ್ಕೆ ಏರಿಕೆಯಾಗಿದೆ.</p>.<p>ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಒಂದು ದಿನದಲ್ಲಿ 504 ಜನರಿಗೆ ಸೋಂಕು ತಗುಲಿದೆ. ಈವರೆಗೆ ಸೋಂಕಿಗೊಳಪಟ್ಟವರ ಸಂಖ್ಯೆ29.73 ಲಕ್ಷಕ್ಕೆ ಹೆಚ್ಚಿದೆ. ಕೋವಿಡ್ ದೃಢ ಪ್ರಮಾಣವು ಶೇ0.48ರಷ್ಟಿದೆ.</p>.<p>ಹಿಂದಿನ 24 ಗಂಟೆಗಳಲ್ಲಿ893 ಜನರಿಗೆ ಕಾಯಿಲೆ ವಾಸಿಯಾಗಿದೆ. ಹೀಗಾಗಿ ಗುಣಮುಖರ ಒಟ್ಟು ಸಂಖ್ಯೆಯು29.23 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳು ಮತ್ತಷ್ಟು ಇಳಿಕೆಯಾಗಿವೆ. ಸದ್ಯ12,804 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಬೆಂಗಳೂರಿನಲ್ಲಿ ಹೊಸ ಪ್ರಕರಣಗಳು ಇಳಿಕೆಯಾಗಿವೆ. ಸೋಮವಾರ 181 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬಾಗಲಕೋಟೆ, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಮನಗರ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ. 9 ಜಿಲ್ಲೆಗಳಲ್ಲಿ ಇದು ಒಂದಂಕಿಯಷ್ಟಿದೆ. ಕೇರಳಕ್ಕೆ ಹೊಂದಿಕೊಂಡಂತಿರುವ ಗಡಿ ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡದಲ್ಲಿ83 ಪ್ರಕರಣಗಳು ದಾಖಲಾಗಿವೆ. ಕೊಡಗು ಮತ್ತು ಮೈಸೂರಿನಲ್ಲಿ ಕ್ರಮವಾಗಿ 26 ಮತ್ತು 47 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಏಳು ಜಿಲ್ಲೆಗಳಲ್ಲಿ ಇದು 20ಕ್ಕಿಂತ ಕಡಿಮೆ ಇದೆ.</p>.<p>ಕೋವಿಡ್ ಪೀಡಿತರ ಪೈಕಿ ಬೆಂಗಳೂರಿನಲ್ಲಿ 5 ಜನ ಅಸುನೀಗಿದ್ದಾರೆ. ದಕ್ಷಿಣ ಕನ್ನಡ (4), ಮೈಸೂರು (3) ಮತ್ತು ಮಂಡ್ಯದಲ್ಲಿ (2) ಹೆಚ್ಚು ಮಂದಿ ಮೃತರಾಗಿದ್ದಾರೆ. ಬಾಗಲಕೋಟೆ, ಚಿಕ್ಕಮಗಳೂರು, ಹಾಸನ, ಕೋಲಾರ, ತುಮಕೂರು, ಉಡುಪಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಮೃತರ ಪೈಕಿ ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆ ಎದುರಿಸುತ್ತಿದ್ದವರೇ ಹೆಚ್ಚಿದ್ದಾರೆ.</p>.<p>ಕೋವಿಡ್ ಪರೀಕ್ಷೆಯಲ್ಲಿ ಗಣನೀಯ ಇಳಿಕೆಯಾಗಿದೆ. ಒಂದು ದಿನದಲ್ಲಿ 1.03 ಲಕ್ಷ ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪೀಡಿತರ ಪೈಕಿ ಸೋಮವಾರ 20 ಮಂದಿ ಅಸುನೀಗಿದ್ದಾರೆ. ಈವರೆಗೆ37,746 ಜನ ಮೃತರಾಗಿದ್ದು, ಮರಣ ಪ್ರಮಾಣ ದರವು ಶೇ 3.96ಕ್ಕೆ ಏರಿಕೆಯಾಗಿದೆ.</p>.<p>ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಒಂದು ದಿನದಲ್ಲಿ 504 ಜನರಿಗೆ ಸೋಂಕು ತಗುಲಿದೆ. ಈವರೆಗೆ ಸೋಂಕಿಗೊಳಪಟ್ಟವರ ಸಂಖ್ಯೆ29.73 ಲಕ್ಷಕ್ಕೆ ಹೆಚ್ಚಿದೆ. ಕೋವಿಡ್ ದೃಢ ಪ್ರಮಾಣವು ಶೇ0.48ರಷ್ಟಿದೆ.</p>.<p>ಹಿಂದಿನ 24 ಗಂಟೆಗಳಲ್ಲಿ893 ಜನರಿಗೆ ಕಾಯಿಲೆ ವಾಸಿಯಾಗಿದೆ. ಹೀಗಾಗಿ ಗುಣಮುಖರ ಒಟ್ಟು ಸಂಖ್ಯೆಯು29.23 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳು ಮತ್ತಷ್ಟು ಇಳಿಕೆಯಾಗಿವೆ. ಸದ್ಯ12,804 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಬೆಂಗಳೂರಿನಲ್ಲಿ ಹೊಸ ಪ್ರಕರಣಗಳು ಇಳಿಕೆಯಾಗಿವೆ. ಸೋಮವಾರ 181 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬಾಗಲಕೋಟೆ, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಮನಗರ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ. 9 ಜಿಲ್ಲೆಗಳಲ್ಲಿ ಇದು ಒಂದಂಕಿಯಷ್ಟಿದೆ. ಕೇರಳಕ್ಕೆ ಹೊಂದಿಕೊಂಡಂತಿರುವ ಗಡಿ ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡದಲ್ಲಿ83 ಪ್ರಕರಣಗಳು ದಾಖಲಾಗಿವೆ. ಕೊಡಗು ಮತ್ತು ಮೈಸೂರಿನಲ್ಲಿ ಕ್ರಮವಾಗಿ 26 ಮತ್ತು 47 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಏಳು ಜಿಲ್ಲೆಗಳಲ್ಲಿ ಇದು 20ಕ್ಕಿಂತ ಕಡಿಮೆ ಇದೆ.</p>.<p>ಕೋವಿಡ್ ಪೀಡಿತರ ಪೈಕಿ ಬೆಂಗಳೂರಿನಲ್ಲಿ 5 ಜನ ಅಸುನೀಗಿದ್ದಾರೆ. ದಕ್ಷಿಣ ಕನ್ನಡ (4), ಮೈಸೂರು (3) ಮತ್ತು ಮಂಡ್ಯದಲ್ಲಿ (2) ಹೆಚ್ಚು ಮಂದಿ ಮೃತರಾಗಿದ್ದಾರೆ. ಬಾಗಲಕೋಟೆ, ಚಿಕ್ಕಮಗಳೂರು, ಹಾಸನ, ಕೋಲಾರ, ತುಮಕೂರು, ಉಡುಪಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಮೃತರ ಪೈಕಿ ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆ ಎದುರಿಸುತ್ತಿದ್ದವರೇ ಹೆಚ್ಚಿದ್ದಾರೆ.</p>.<p>ಕೋವಿಡ್ ಪರೀಕ್ಷೆಯಲ್ಲಿ ಗಣನೀಯ ಇಳಿಕೆಯಾಗಿದೆ. ಒಂದು ದಿನದಲ್ಲಿ 1.03 ಲಕ್ಷ ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>