ಬೆಂಗಳೂರು: ‘ಕೋವಿಡ್ ಸೇನಾನಿಯಾಗಿ ಕೆಲಸ ಮಾಡುತ್ತಿದ್ದವರ ಪೈಕಿ ಅನೇಕರು ಸೋಂಕಿಗೊಳಪಟ್ಟು ಮೃತರಾಗಿದ್ದಾರೆ. ಅಂತಹವರ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ₹2 ಲಕ್ಷದವರೆಗೆ ವಿದ್ಯಾರ್ಥಿ ವೇತನ ನೀಡಲು ಚಿಂತಿಸಲಾಗಿದೆ. ಪದವಿ ಪೂರೈಸಿದವರಿಗೆ ಉದ್ಯೋಗ ಕಲ್ಪಿಸುವ ಆಲೋಚನೆಯೂ ಇದೆ. ಇದಕ್ಕಾಗಿ ಸಂಬಂಧಪಟ್ಟ ಕುಟುಂಬದವರು ಹೆಸರು ನೋಂದಾಯಿಸಿಕೊಳ್ಳಬೇಕು’ ಎಂದು ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ವಿಜಯ ಭಾಸ್ಕರನ್ ತಿಳಿಸಿದರು.