ಸುಬ್ರಹ್ಮಣ್ಯ: ಸರ್ಕಾರ ಲಾಕ್ಡೌನ್ ಜಾರಿ ಮಾಡಿದ ಹಿನ್ನಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಅನಗತ್ಯ ತಿರುಗಾಟಕ್ಕೆ ನಿರ್ಬಂಧ ಹೇರಲಾಗಿದೆ.
ಪೊಲೀಸರುಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಅನಗತ್ಯವಾಗಿ ಸಂಚರಿಸಿದ ವಾಹನಗಳನ್ನು ತಪಾಸಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳಗಿನಿಂದಲೇ ಕಾರ್ಯಚರಣೆ ಆರಂಭಿಸಿರುವ ಪೊಲೀಸರು ಜನರಿಗೆ ಬಿಸಿ ಮುಟ್ಟಿಸಿ, ಅನಗತ್ಯವಾಗಿತಿರುಗಾಡದಂತೆ ಎಚ್ಚರಿಕೆ ನೀಡಿದ್ದಾರೆ. ತುರ್ತು ಸೇವೆಹಾಗೂ ಪಾಸ್ಗಳ ಮೂಲಕ ಸಂಚರಿಸುವ ವಾಹನಗಳಿಗೆ ಅವಕಾಶ ಕಲ್ಪಿಸಲಾಗಿದೆ.