<p><strong>ಬೆಂಗಳೂರು</strong>: ಕೋವಿಡ್ ಮತ್ತು ಲಾಕ್ಡೌನ್ನಿಂದಾಗಿ ವೇತನ ಇಲ್ಲದೇ ಸಂಕಷ್ಟದಲ್ಲಿರುವ ಅನುದಾನರಹಿತ ಶಾಲಾ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ಅಡಿ ತಲಾ ₹ 5,000 ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.</p>.<p>ಕಷ್ಟದಲ್ಲಿರುವ ಶಿಕ್ಷಕರು ಮತ್ತು ಬೋಧಕೇತರರ ನೆರವಿಗೆ ಸರ್ಕಾರ ನಿಲ್ಲಬೇಕು ಎಂದು ವರ್ಷದಿಂದಲೂ ಬೇಡಿಕೆ ಇತ್ತು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಅವರು ನಡೆಸಿದ ಹಲವು ಸಭೆಗಳಲ್ಲಿ ಈ ಬೇಡಿಕೆ ಮಂಡನೆಯಾಗಿತ್ತು. ಖಾಸಗಿ ಶಿಕ್ಷಣ ಸಂಸ್ಥೆಗಳು, ಶಿಕ್ಷಕ ಪ್ರತಿನಿಧಿಗಳ ಮನವಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಮನಕ್ಕೆ ತರಲಾಗಿತ್ತು. ಈ ಕುರಿತು ಪ್ರಸ್ತಾವನೆ ಸಿದ್ಧಪಡಿಸಿದ್ದ ಇಲಾಖೆ ಅದನ್ನು ಆರ್ಥಿಕ ಇಲಾಖೆಗೆ ಕಳಿಸಿತ್ತು. ಅದಕ್ಕೆ ಈಗ ಒಪ್ಪಿಗೆ ಸಿಕ್ಕಿದೆ.</p>.<p>ರಾಜ್ಯದ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,72,945 ಶಿಕ್ಷಕರು ಮತ್ತು 34,000 ಬೋಧಕೇತರ ಸಿಬ್ಬಂದಿ ಒಳಗೊಂಡಂತೆ ಒಟ್ಟು 2,06,945 ಸಿಬ್ಬಂದಿಗೆ ಪರಿಹಾರ ಸಿಗಲಿದೆ. ಈ ಉದ್ದೇಶಕ್ಕೆ ₹103.47 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಲು ಶುಕ್ರವಾರ ಹೊರಡಿಸಿದ ಆದೇಶದಲ್ಲಿ ಸೂಚಿಸಲಾಗಿದೆ.</p>.<p>ಆರ್ಟಿಇ ಅಡಿ ಖಾಸಗಿ ಶಾಲೆಗಳ ಶುಲ್ಕ ಮರುಪಾವತಿ ಕಾರ್ಯಕ್ರಮದಡಿ ಒದಗಿಸಲಾದ ಅನುದಾನದಿಂದ ಈ ಮೊತ್ತವನ್ನು ಭರಿಸಲಾಗುವುದು. ಪರಿಹಾರದ ಮೊತ್ತವನ್ನು ಅರ್ಹ ಫಲಾನುಭವಿಗಳ ಖಾತೆಗೇ ಜಮೆ ಮಾಡಲಾಗುವುದು. ಅದಕ್ಕೂ ಮೊದಲು ಅವರು ಬ್ಯಾಂಕ್ ಖಾತೆಯನ್ನು ಆಧಾರ್ಗೆ ಜೋಡಣೆ ಮಾಡಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p><strong>ವೇತನ ಇಲ್ಲದೆ ಸಂಕಷ್ಟ</strong><br />ಖಾಸಗಿ ಅನುದಾನರಹಿತ ಬಹುತೇಕ ಶಾಲೆಗಳಲ್ಲಿ ವೇತನ ನೀಡುತ್ತಿಲ್ಲ, ಕೆಲವು ಕಡೆಗಳಲ್ಲಿ ಅರ್ಧದಷ್ಟು ವೇತನ ನೀಡುತ್ತಿದ್ದಾರೆ. ಇವರಲ್ಲಿ ಬಹುತೇಕರು ಜೀವನೋಪಾಯಕ್ಕಾಗಿ ಹಣ್ಣು–ತರಕಾರಿ ಮಾರುವುದೂ ಸೇರಿದಂತೆ ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.</p>.<p>ಈ ಮಧ್ಯೆ, ಸಚಿವ ಎಸ್.ಸುರೇಶ್ಕುಮಾರ್ ಅವರು ಸರ್ಕಾರಿ ಶಿಕ್ಷಕರು ತಮ್ಮ ವೇತನದಲ್ಲಿ ಒಂದು ಅಥವಾ ಎರಡು ದಿನಗಳ ವೇತನವನ್ನು ಪರಿಹಾರಕ್ಕಾಗಿ ನೀಡಲು ಸಾಧ್ಯವೇ ಎಂದು ಮನವಿ ಮಾಡಿದ್ದರು. ಅದನ್ನು ಶಿಕ್ಷಕರ ಸಂಘ ಒಪ್ಪಿಕೊಂಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋವಿಡ್ ಮತ್ತು ಲಾಕ್ಡೌನ್ನಿಂದಾಗಿ ವೇತನ ಇಲ್ಲದೇ ಸಂಕಷ್ಟದಲ್ಲಿರುವ ಅನುದಾನರಹಿತ ಶಾಲಾ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ವಿಶೇಷ ಪ್ಯಾಕೇಜ್ ಅಡಿ ತಲಾ ₹ 5,000 ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.</p>.<p>ಕಷ್ಟದಲ್ಲಿರುವ ಶಿಕ್ಷಕರು ಮತ್ತು ಬೋಧಕೇತರರ ನೆರವಿಗೆ ಸರ್ಕಾರ ನಿಲ್ಲಬೇಕು ಎಂದು ವರ್ಷದಿಂದಲೂ ಬೇಡಿಕೆ ಇತ್ತು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಅವರು ನಡೆಸಿದ ಹಲವು ಸಭೆಗಳಲ್ಲಿ ಈ ಬೇಡಿಕೆ ಮಂಡನೆಯಾಗಿತ್ತು. ಖಾಸಗಿ ಶಿಕ್ಷಣ ಸಂಸ್ಥೆಗಳು, ಶಿಕ್ಷಕ ಪ್ರತಿನಿಧಿಗಳ ಮನವಿಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಮನಕ್ಕೆ ತರಲಾಗಿತ್ತು. ಈ ಕುರಿತು ಪ್ರಸ್ತಾವನೆ ಸಿದ್ಧಪಡಿಸಿದ್ದ ಇಲಾಖೆ ಅದನ್ನು ಆರ್ಥಿಕ ಇಲಾಖೆಗೆ ಕಳಿಸಿತ್ತು. ಅದಕ್ಕೆ ಈಗ ಒಪ್ಪಿಗೆ ಸಿಕ್ಕಿದೆ.</p>.<p>ರಾಜ್ಯದ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,72,945 ಶಿಕ್ಷಕರು ಮತ್ತು 34,000 ಬೋಧಕೇತರ ಸಿಬ್ಬಂದಿ ಒಳಗೊಂಡಂತೆ ಒಟ್ಟು 2,06,945 ಸಿಬ್ಬಂದಿಗೆ ಪರಿಹಾರ ಸಿಗಲಿದೆ. ಈ ಉದ್ದೇಶಕ್ಕೆ ₹103.47 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಲು ಶುಕ್ರವಾರ ಹೊರಡಿಸಿದ ಆದೇಶದಲ್ಲಿ ಸೂಚಿಸಲಾಗಿದೆ.</p>.<p>ಆರ್ಟಿಇ ಅಡಿ ಖಾಸಗಿ ಶಾಲೆಗಳ ಶುಲ್ಕ ಮರುಪಾವತಿ ಕಾರ್ಯಕ್ರಮದಡಿ ಒದಗಿಸಲಾದ ಅನುದಾನದಿಂದ ಈ ಮೊತ್ತವನ್ನು ಭರಿಸಲಾಗುವುದು. ಪರಿಹಾರದ ಮೊತ್ತವನ್ನು ಅರ್ಹ ಫಲಾನುಭವಿಗಳ ಖಾತೆಗೇ ಜಮೆ ಮಾಡಲಾಗುವುದು. ಅದಕ್ಕೂ ಮೊದಲು ಅವರು ಬ್ಯಾಂಕ್ ಖಾತೆಯನ್ನು ಆಧಾರ್ಗೆ ಜೋಡಣೆ ಮಾಡಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.<p><strong>ವೇತನ ಇಲ್ಲದೆ ಸಂಕಷ್ಟ</strong><br />ಖಾಸಗಿ ಅನುದಾನರಹಿತ ಬಹುತೇಕ ಶಾಲೆಗಳಲ್ಲಿ ವೇತನ ನೀಡುತ್ತಿಲ್ಲ, ಕೆಲವು ಕಡೆಗಳಲ್ಲಿ ಅರ್ಧದಷ್ಟು ವೇತನ ನೀಡುತ್ತಿದ್ದಾರೆ. ಇವರಲ್ಲಿ ಬಹುತೇಕರು ಜೀವನೋಪಾಯಕ್ಕಾಗಿ ಹಣ್ಣು–ತರಕಾರಿ ಮಾರುವುದೂ ಸೇರಿದಂತೆ ವಿವಿಧ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ.</p>.<p>ಈ ಮಧ್ಯೆ, ಸಚಿವ ಎಸ್.ಸುರೇಶ್ಕುಮಾರ್ ಅವರು ಸರ್ಕಾರಿ ಶಿಕ್ಷಕರು ತಮ್ಮ ವೇತನದಲ್ಲಿ ಒಂದು ಅಥವಾ ಎರಡು ದಿನಗಳ ವೇತನವನ್ನು ಪರಿಹಾರಕ್ಕಾಗಿ ನೀಡಲು ಸಾಧ್ಯವೇ ಎಂದು ಮನವಿ ಮಾಡಿದ್ದರು. ಅದನ್ನು ಶಿಕ್ಷಕರ ಸಂಘ ಒಪ್ಪಿಕೊಂಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>