<p><strong>ಬೆಂಗಳೂರು</strong>: ಕೊಡಗು ಜಿಲ್ಲೆ ಬಿಟ್ಟು ರಾಜ್ಯದಾದ್ಯಂತ ಸೋಮವಾರದಿಂದ (ಜು.5) ದೇವಸ್ಥಾನಗಳು, ಮಾಲ್ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.</p>.<p>ರಾತ್ರಿ 9 ಗಂಟೆಯವರೆಗೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಿದ್ದು, ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಲಾಗಿದೆ. ಆದರೆ, ಪ್ರತಿದಿನ ರಾತ್ರಿ 9ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸದಲ್ಲಿ ಶನಿವಾರ ಸಂಜೆ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪರಿಷ್ಕೃತ ಮಾರ್ಗಸೂಚಿಗಳನ್ನೂ ಹೊರಡಿಸಲಾಗಿದೆ. ಜುಲೈ 19ರವರೆಗೂ ಈ ನಿಯಮ ಜಾರಿಯಲ್ಲಿರಲಿದೆ.</p>.<p>‘ಸೋಮವಾರದಿಂದ ಎಲ್ಲ ಸರ್ಕಾರಿ, ಖಾಸಗಿ ಕಚೇರಿಗಳು, ಕೈಗಾರಿಕೆಗಳು ಮತ್ತು ವಾಣಿಜ್ಯ ಸಂಸ್ಥೆಗಳು ಶೇಕಡ 100ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು. ಮಾಲ್ಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ’ ಎಂದು ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು.</p>.<p>ಮೆಟ್ರೊ ರೈಲು ಮತ್ತು ಬಸ್ಗಳಲ್ಲಿ ಸಾಮರ್ಥ್ಯದ ಶೇ 100ರಷ್ಟು ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕ್ರೀಡಾ ಸಂಕೀರ್ಣಗಳು ಮತ್ತು ಈಜು ಕೊಳಗಳಲ್ಲಿ ಕ್ರೀಡಾಪಟುಗಳ ತರಬೇತಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದರು.</p>.<p class="Subhead"><strong>ದರ್ಶನಕ್ಕಷ್ಟೆ ಅವಕಾಶ: ‘</strong>ದೇವಸ್ಥಾನಗಳನ್ನು ತೆರೆಯಲಿದ್ದರೂ ದರ್ಶನಕ್ಕಷ್ಟೇ ಅವಕಾಶ. ಯಾವುದೇ ರೀತಿಯ ಸೇವೆಗಳು ಇರುವುದಿಲ್ಲ. ಚಿತ್ರಮಂದಿರಗಳನ್ನು ತೆರೆಯುವಂತಿಲ್ಲ. ಶಾಲಾ, ಕಾಲೇಜುಗಳ ಪುನರಾರಂಭದ ಕುರಿತು ಪ್ರತ್ಯೇಕವಾಗಿ ಸಭೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p class="Subhead"><strong>ಮದ್ಯ ಸೇವನೆಗೆ ಅನುಮತಿ:</strong> ಬಾರ್ಗಳಲ್ಲಿ ಮದ್ಯ ಸೇವಿಸಲು ಅನುಮತಿ ಇದೆ. ಪಬ್ಗಳಿಗೆ ಅವಕಾಶ ನೀಡಿಲ್ಲ. ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ.</p>.<p>ಮದುವೆ ಮತ್ತಿತರ ಕೌಟುಂಬಿಕ ಸಮಾರಂಭಗಳಿಗೆ 100 ಜನರು ಹಾಗೂ ಅಂತ್ಯಸಂಸ್ಕಾರದಲ್ಲಿ 20 ಜನ ಪಾಲ್ಗೊಳ್ಳಬಹುದು. ಸಾಮಾಜಿಕ, ಧಾರ್ಮಿಕ, ರಾಜಕೀಯ ಸಭೆ ಸಮಾರಂಭಗಳು, ಪ್ರತಿಭಟನೆಗಳು ಮತ್ತು ಇತರ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೊಡಗು ಜಿಲ್ಲೆ ಬಿಟ್ಟು ರಾಜ್ಯದಾದ್ಯಂತ ಸೋಮವಾರದಿಂದ (ಜು.5) ದೇವಸ್ಥಾನಗಳು, ಮಾಲ್ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.</p>.<p>ರಾತ್ರಿ 9 ಗಂಟೆಯವರೆಗೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಿದ್ದು, ವಾರಾಂತ್ಯದ ಕರ್ಫ್ಯೂ ರದ್ದುಗೊಳಿಸಲಾಗಿದೆ. ಆದರೆ, ಪ್ರತಿದಿನ ರಾತ್ರಿ 9ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ.</p>.<p>ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿವಾಸದಲ್ಲಿ ಶನಿವಾರ ಸಂಜೆ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪರಿಷ್ಕೃತ ಮಾರ್ಗಸೂಚಿಗಳನ್ನೂ ಹೊರಡಿಸಲಾಗಿದೆ. ಜುಲೈ 19ರವರೆಗೂ ಈ ನಿಯಮ ಜಾರಿಯಲ್ಲಿರಲಿದೆ.</p>.<p>‘ಸೋಮವಾರದಿಂದ ಎಲ್ಲ ಸರ್ಕಾರಿ, ಖಾಸಗಿ ಕಚೇರಿಗಳು, ಕೈಗಾರಿಕೆಗಳು ಮತ್ತು ವಾಣಿಜ್ಯ ಸಂಸ್ಥೆಗಳು ಶೇಕಡ 100ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು. ಮಾಲ್ಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ’ ಎಂದು ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು.</p>.<p>ಮೆಟ್ರೊ ರೈಲು ಮತ್ತು ಬಸ್ಗಳಲ್ಲಿ ಸಾಮರ್ಥ್ಯದ ಶೇ 100ರಷ್ಟು ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕ್ರೀಡಾ ಸಂಕೀರ್ಣಗಳು ಮತ್ತು ಈಜು ಕೊಳಗಳಲ್ಲಿ ಕ್ರೀಡಾಪಟುಗಳ ತರಬೇತಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದರು.</p>.<p class="Subhead"><strong>ದರ್ಶನಕ್ಕಷ್ಟೆ ಅವಕಾಶ: ‘</strong>ದೇವಸ್ಥಾನಗಳನ್ನು ತೆರೆಯಲಿದ್ದರೂ ದರ್ಶನಕ್ಕಷ್ಟೇ ಅವಕಾಶ. ಯಾವುದೇ ರೀತಿಯ ಸೇವೆಗಳು ಇರುವುದಿಲ್ಲ. ಚಿತ್ರಮಂದಿರಗಳನ್ನು ತೆರೆಯುವಂತಿಲ್ಲ. ಶಾಲಾ, ಕಾಲೇಜುಗಳ ಪುನರಾರಂಭದ ಕುರಿತು ಪ್ರತ್ಯೇಕವಾಗಿ ಸಭೆ ನಡೆಸಿ, ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.</p>.<p class="Subhead"><strong>ಮದ್ಯ ಸೇವನೆಗೆ ಅನುಮತಿ:</strong> ಬಾರ್ಗಳಲ್ಲಿ ಮದ್ಯ ಸೇವಿಸಲು ಅನುಮತಿ ಇದೆ. ಪಬ್ಗಳಿಗೆ ಅವಕಾಶ ನೀಡಿಲ್ಲ. ವಾರಾಂತ್ಯದ ಕರ್ಫ್ಯೂ ಇರುವುದಿಲ್ಲ.</p>.<p>ಮದುವೆ ಮತ್ತಿತರ ಕೌಟುಂಬಿಕ ಸಮಾರಂಭಗಳಿಗೆ 100 ಜನರು ಹಾಗೂ ಅಂತ್ಯಸಂಸ್ಕಾರದಲ್ಲಿ 20 ಜನ ಪಾಲ್ಗೊಳ್ಳಬಹುದು. ಸಾಮಾಜಿಕ, ಧಾರ್ಮಿಕ, ರಾಜಕೀಯ ಸಭೆ ಸಮಾರಂಭಗಳು, ಪ್ರತಿಭಟನೆಗಳು ಮತ್ತು ಇತರ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>