ಮುಖ್ಯಮಂತ್ರಿಯವರಿಗೆ ಶುಕ್ರವಾರ ಪತ್ರ ಬರೆದಿರುವ ಅವರು, ‘ಓಮೈಕ್ರಾನ್ ವೈರಾಣು ಎಷ್ಟು ಅಪಾಯಕಾರಿ ಎಂಬುದರ ಕುರಿತು ಇನ್ನೂ ಸ್ಪಷ್ಟ ವರದಿ ಲಭಿಸಿಲ್ಲ. ಇಂತಹ ಸನ್ನಿವೇಶದಲ್ಲಿ ಜನರ ಪ್ರಾಣ ರಕ್ಷಣೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು. ವಾರಾಂತ್ಯದ ಕರ್ಫ್ಯೂ, ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವುದನ್ನು ಕಡ್ಡಾಯಗೊಳಿಸುವುದನ್ನು (ವರ್ಕ್ ಫ್ರಂ ಹೋಮ್) ಜಾರಿಗೆ ತರಬೇಕು’ ಎಂದು ಒತ್ತಾಯಿಸಿದ್ದಾರೆ.