ಬೆಂಗಳೂರು: ಕೋವಿಡ್–19 ಸೋಂಕಿನ ವಿರುದ್ಧದ ಹೋರಾಟದ ಭಾಗವಾಗಿ ಸರ್ಕಾರವು ಪ್ರತಿ ಜಿಲ್ಲೆಯಲ್ಲೂ ಕ್ವಾರಂಟೈನ್ ಕೇಂದ್ರ ಮತ್ತು ಅನಾಥ ಮಕ್ಕಳ ಪಾಲನೆಗೆ ಪ್ರತ್ಯೇಕ ಕೇಂದ್ರ ಆರಂಭಿಸಿದೆ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.
‘ಕೋವಿಡ್ ಸೋಂಕಿನಿಂದ ಪಾಲಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳ ಪಾಲನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರತ್ಯೇಕ ಕ್ವಾರಂಟೈನ್ ಕೇಂದ್ರಗಳನ್ನು ಆರಂಭಿಸಿದೆ. 993 ಕೇಂದ್ರಗಳಲ್ಲಿ 7069 ಮಕ್ಕಳು ಆಶ್ರಯ ಪಡೆದಿದ್ದಾರೆ. ಗಂಡು - ಹೆಣ್ಣು ಮಕ್ಕಳಿಗೆ ಪ್ರತ್ಯೇಕವಾಗಿ ಆಶ್ರಯ ಕಲ್ಪಿಸಲಾಗುವುದು’ ಎಂದು ಟ್ವೀಟ್ನಲ್ಲಿ ಉಲ್ಲೇಖಿಸಿದೆ.
‘ಪ್ರತಿ ಜಿಲ್ಲೆಯಲ್ಲೂ ಕ್ವಾರಂಟೈನ್ ಕೇಂದ್ರ ಸ್ಥಾಪನೆಯಾಗಿದೆ. ಮಾಹಿತಿಗಾಗಿ 1098 / 14499 ಕ್ಕೆ ಕರೆಮಾಡಿ. ಕೋವಿಡ್ ವಿರುದ್ಧದ ಹೋರಾಟವನ್ನು ಬಿಎಸ್ವೈ ಸರ್ಕಾರ ಬಲಪಡಿಸುತ್ತಿದೆ’ ಎಂದು ಮತ್ತೊಂದು ಟ್ವೀಟ್ನಲ್ಲಿ ಹೇಳಿದೆ.
‘ಕೋವಿಡ್ ಸೋಂಕಿತರಿಗಾಗಿ ರಾಜ್ಯ ಸರ್ಕಾರ ಬೆಂಗಳೂರು ಕೃಷಿ ವಿವಿ ಜಿಕೆವಿಕೆ ಆವರಣದಲ್ಲಿ ಕೋವಿಡ್ ಆರೈಕೆ ಕೇಂದ್ರ ಆರಂಭಿಸಿದೆ. ಈ ಕೇಂದ್ರ 350 ಹಾಸಿಗೆ ಸಾಮರ್ಥ್ಯ ಹೊಂದಿರಲಿದೆ. ವೈದ್ಯಕೀಯ ಸಿಬ್ಬಂದಿಗಾಗಿ 30 ಹಾಸಿಗೆ ಸಾಮರ್ಥ್ಯದ ಸ್ಟಾಫ್ ಕ್ವಾಟ್ರರ್ಸ್ ಸೌಲಭ್ಯವಿರಲಿದೆ. 24 ಗಂಟೆ ಸೇವೆ ಲಭ್ಯವಿರಲಿದೆ’ ಎಂದೂ ಬಿಜೆಪಿ ಹೇಳಿದೆ.
ಕೋವಿಡ್ ಸೋಂಕಿನಿಂದ ಪಾಲಕರನ್ನು ಕಳೆದುಕೊಂಡು ಅನಾಥರಾದ ಮಕ್ಕಳ ಪಾಲನೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರತ್ಯೇಕ ಕ್ವಾರಂಟೈನ್ ಕೇಂದ್ರ ಆರಂಭಿಸಿದೆ.
— BJP Karnataka (@BJP4Karnataka) May 11, 2021
√ 993 ಕೇಂದ್ರಗಳಲ್ಲಿ 7069 ಮಕ್ಕಳು ಆಶ್ರಯ ಪಡೆದಿದ್ದಾರೆ.
√ ಗಂಡು - ಹೆಣ್ಣು ಮಕ್ಕಳಿಗೆ ಪ್ರತ್ಯೇಕವಾಗಿ ಆಶ್ರಯ ಕಲ್ಪಿಸಲಾಗುವುದು.
1/2#KarnatakaFightsCorona
√ ಪ್ರತಿ ಜಿಲ್ಲೆಯಲ್ಲೂ ಕ್ವಾರಂಟೈನ್ ಕೇಂದ್ರ ಸ್ಥಾಪನೆ.
— BJP Karnataka (@BJP4Karnataka) May 11, 2021
√ ಮಾಹಿತಿಗಾಗಿ 1098 / 14499 ಕ್ಕೆ ಕರೆಮಾಡಿ.
ಕೋವಿಡ್ ವಿರುದ್ಧದ ಹೋರಾಟವನ್ನು ಬಲಪಡಿಸುತ್ತಿದೆ ಬಿಎಸ್ವೈ ಸರ್ಕಾರ.
2/2#KarnatakaFightsCorona
ಕೋವಿಡ್ ಸೋಂಕಿತರಿಗಾಗಿ ರಾಜ್ಯ ಸರ್ಕಾರ ಬೆಂಗಳೂರು ಕೃಷಿ ವಿವಿ ಜಿಕೆವಿಕೆ ಆವರಣದಲ್ಲಿ ಕೋವಿಡ್ ಆರೈಕೆ ಕೇಂದ್ರ ಆರಂಭಿಸಿದೆ.
— BJP Karnataka (@BJP4Karnataka) May 11, 2021
√ ಈ ಕೇಂದ್ರ 350 ಹಾಸಿಗೆ ಸಾಮರ್ಥ್ಯ ಹೊಂದಿರಲಿದೆ.
√ ವೈದ್ಯಕೀಯ ಸಿಬ್ಬಂದಿಗಾಗಿ 30 ಹಾಸಿಗೆ ಸಾಮರ್ಥ್ಯದ ಸ್ಟಾಫ್ ಕ್ವಾಟ್ರರ್ಸ್ ಸೌಲಭ್ಯವಿರಲಿದೆ.
√ 24 ಗಂಟೆ ಸೇವೆ ಲಭ್ಯವಿರಲಿದೆ.#KarnatakaFightsCorona
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.