ಬಾಗಲಕೋಟೆ: ಸಿಟಿ ಸ್ಕ್ಯಾನ್ನಲ್ಲಿ ಕೋವಿಡ್ ಲಕ್ಷಣಗಳು ಪತ್ತೆಯಾಗಿ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದವರ ಮಾಹಿತಿ ಆರೋಗ್ಯ ಇಲಾಖೆಯ ತಂತ್ರಾಂಶದಲ್ಲಿ ದಾಖಲಾಗುತ್ತಿಲ್ಲ. ಇದು ರಾಜ್ಯ ಸರ್ಕಾರ ಕೋವಿಡ್ ಸಾವಿಗೆ ಘೋಷಿಸಿರುವ ₹ 1 ಲಕ್ಷ ಪರಿಹಾರ ಪಡೆಯಲು ಅಡ್ಡಿಯಾಗಲಿದೆಯೇ ಎಂಬ ಆತಂಕ ರೋಗಿಗಳ ಅವಲಂಬಿತರಿಗೆ ಎದುರಾಗಿದೆ.