ರೋಗಿಯ ಪತ್ನಿ ಕಣ್ಣೀರು ಹಾಕುತ್ತಾ ತಮ್ಮ ಪತಿಯನ್ನು ಉಳಿಸಿಕೊಳ್ಳಲು ಬೆಡ್ ಮತ್ತು ವೆಂಟಿಲೇಟರ್ ವ್ಯವಸ್ಥೆ ಮಾಡಿಕೊಡಿ ಎಂದು ಪರಿಪರಿಯಾಗಿ ಬೇಡಿಕೊಂಡರು. ಈ ವಿಷಯ ಮುಖ್ಯಮಂತ್ರಿಯವರ ಗಮನಕ್ಕೆ ಬರುತ್ತಿದ್ದಂತೆ, ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಹಾಸಿಗೆ ವ್ಯವಸ್ಥೆ ಮಾಡಿಸಿದರು. ಆದರೆ, ಆಸ್ಪತ್ರೆಗೆ ಒಯ್ಯುವ ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟರೆಂದು ಮೂಲಗಳು ಹೇಳಿವೆ.