<p><strong>ಬೆಂಗಳೂರು:</strong> ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಸಾರ್ವಜನಿಕ ಸಭೆ, ಸಮಾರಂಭ ಮತ್ತು ವಿವಿಧ ಆಚರಣೆಗಳಲ್ಲಿ ಜನ ಸೇರುವುದಕ್ಕೆ ಕಠಿಣ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಶುಕ್ರವಾರ ಬೆಳಿಗ್ಗೆ ಕೋವಿಡ್ ನಿರ್ವಹಣೆ ಕುರಿತು ತುರ್ತುಸಭೆ ನಡೆಸಲಾಯಿತು. ಆ ಸಂದರ್ಭದಲ್ಲಿ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿತ್ತು. ಇದನ್ನು ಆಧರಿಸಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದ್ದಾರೆ.</p>.<p>ಹೊಸ ಮಾರ್ಗಸೂಚಿಯ ಪ್ರಕಾರ, ಧಾರ್ಮಿಕ ಆಚರಣೆ ಮತ್ತು ಸಮಾರಂಭಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೆ, ತೆರೆದ ಪ್ರದೇಶದಲ್ಲಿ 200 ಜನ ಮೀರದಂತೆ ರಾಜಕೀಯ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡಲಾಗಿದೆ.</p>.<p>ಮದುವೆಗಳನ್ನು ತೆರೆದ ಪ್ರದೇಶದಲ್ಲಿ ನಡೆಸುವುದಾದರೆ 200 ಜನ ಮೀರಬಾರದು. ಕಲ್ಯಾಣ ಮಂಟಪ, ಸಭಾಂಗಣ, ಹಾಲ್ಗಳಲ್ಲಿ 100 ಜನ ಮೀರಬಾರದು. ಸಾಮಾಜಿಕ ಸಮಾರಂಭಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ವ್ಯಕ್ತಿಗಳ ನಡುವೆ 3.25 ಚದರಡಿ ಅಂತರ ಕಾಯ್ದುಕೊಂಡು ನಡೆಸಬಹುದು.</p>.<p>ಜನ್ಮದಿನ ಮತ್ತು ಇತರ ಆಚರಣೆಗಳು ತೆರೆದ ಪ್ರದೇಶದಲ್ಲಿ ನಡೆಸುವುದಾದರೆ 50 ಜನ ಮೀರಬಾರದು, ಸಭಾಂಗಣ ಮತ್ತು ಹಾಲ್ಗಳಲ್ಲಿ 25 ಜನ ಮೀರಬಾರದು. ನಿಧನದ ಸಂದರ್ಭದಲ್ಲಿ ತೆರೆದ ಪ್ರದೇಶದಲ್ಲಿ 50 ಜನ ಮತ್ತು ಮುಚ್ಚಿದ ಪ್ರದೇಶದಲ್ಲಿ 25 ಜನ ಮೀರಬಾರದು. ಶವಸಂಸ್ಕಾರ/ ಅಂತ್ಯಕ್ರಿಯೆಯಲ್ಲಿ 25 ಕ್ಕೂ ಹೆಚ್ಚುಜನ ಭಾಗವಹಿಸಬಾರದು ಎಂದು ತಿಳಿಸಿದೆ.</p>.<p>ಇತರ ಯಾವುದೇ ಸಮಾರಂಭದಲ್ಲಿ ಹಾಲ್ನ ವಿಸ್ತೀರ್ಣಕ್ಕೆ ಅನುಗುಣವಾಗಿ 50 ಕ್ಕೂ ಹೆಚ್ಚು ಜನ ಇರಬಾರದು. ಸಭಾಂಗಣ, ಕಲ್ಯಾಣ ಮಂಟಪ, ಸಿನಿಮಾಮಂದಿರ, ಹಾಲ್ಗಳು ಮತ್ತು ಆಚರಣೆಗೆ ಜನ ಸೇರುವ ಪ್ರದೇಶದಲ್ಲಿ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು.</p>.<p>ಈ ಆದೇಶವು ಬಿಬಿಎಂಪಿ ವ್ಯಾಪ್ತಿ ಮತ್ತು ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗುತ್ತದೆ. ಇದನ್ನು ಉಲ್ಲಂಘಿಸಿದರೆ ವಿಪತ್ತು ನಿರ್ವಹಣೆ ಕಾಯ್ದೆ 2005 ಸೆಕ್ಷನ್ 51 ರಿಂದ 60 ಅನ್ವಯ ಕ್ರಮ ಜರುಗಿಸಲು ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ.</p>.<p><strong>ಬಿಎಸ್ವೈಗೆ ಎರಡನೇ ಬಾರಿ ಕೋವಿಡ್</strong></p>.<p>ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಯಡಿಯೂರಪ್ಪ ಶುಕ್ರವಾರ ಎಂ.ಆರ್.ರಾಮಯ್ಯ ಆಸ್ಪತ್ರೆಯಲ್ಲಿ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡರು.</p>.<p>ಈ ಹಿಂದೆ ಲಾಕ್ಡೌನ್ ಸಂದರ್ಭದಲ್ಲೂ ಸೋಂಕಿಗೆ ಒಳಗಾಗಿದ್ದರು. ಇದೀಗ ಎರಡನೇ ಬಾರಿ ಸೋಂಕಿಗೆ ಒಳಗಾಗಿದ್ದಾರೆ. ‘ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ’ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.</p>.<p><strong>20ಕ್ಕೆ ಮುಂದಿನ ತೀರ್ಮಾನ</strong></p>.<p>‘ಈ ಹಿಂದಿನ ನಿರ್ಧಾರದಂತೆ ಏಪ್ರಿಲ್ 20ರವರೆಗೂ ಎಂಟು ನಗರಗಳಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಯಲಿದೆ’ ಎಂದು ಯಡಿಯೂರಪ್ಪ ತಿಳಿಸಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಜ್ಞರು ವರದಿ ನೀಡಿದ್ದಾರೆ. ಎಂಟು ನಗರಗಳಲ್ಲಿ ರಾತ್ರಿ ಕರ್ಫ್ಯೂ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಬೇರೆ ಕಡೆಗಳಲ್ಲೂ ಜಾರಿಗೊಳಿಸುವ ಕುರಿತು ಉನ್ನತಮಟ್ಟದ ಸಭೆಯ ಬಳಿಕ ತೀರ್ಮಾನಕ್ಕೆ ಬರಲಾಗುವುದು’ ಎಂದರು.</p>.<p><strong>ಸರ್ವಪಕ್ಷಗಳ ಸಭೆ ರದ್ದು</strong></p>.<p>ಕೋವಿಡ್ ವಿಚಾರವಾಗಿ ಭಾನುವಾರ ನಡೆಯಬೇಕಿದ್ದ ಸರ್ವಪಕ್ಷಗಳ ನಾಯಕರ ಸಭೆಯನ್ನು ರದ್ದುಪಡಿಸಲಾಗಿದೆ. ಯಡಿಯೂರಪ್ಪ ಅವರು ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಕಾರಣ ಸಭೆ ಮುಂದೂಡಲಾಗಿದೆ.</p>.<p>ಕೋವಿಡ್ ಸ್ಥಿತಿಯನ್ನು ನಿಭಾಯಿಸಲು ವಿರೋಧ ಪಕ್ಷಗಳ ನಾಯಕರ ಸಲಹೆ ಸೂಚನೆಗಳನ್ನು ಪಡೆಯಲು ನಿರ್ಧರಿಸಲಾಗಿತ್ತು. ಒಂದು ಹಂತದಲ್ಲಿ ಆಸ್ಪತ್ರೆಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲು ಯಡಿಯೂರಪ್ಪ ತೀರ್ಮಾನಿಸಿದ್ದರು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಸಾರ್ವಜನಿಕ ಸಭೆ, ಸಮಾರಂಭ ಮತ್ತು ವಿವಿಧ ಆಚರಣೆಗಳಲ್ಲಿ ಜನ ಸೇರುವುದಕ್ಕೆ ಕಠಿಣ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.</p>.<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಶುಕ್ರವಾರ ಬೆಳಿಗ್ಗೆ ಕೋವಿಡ್ ನಿರ್ವಹಣೆ ಕುರಿತು ತುರ್ತುಸಭೆ ನಡೆಸಲಾಯಿತು. ಆ ಸಂದರ್ಭದಲ್ಲಿ ಕೆಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿತ್ತು. ಇದನ್ನು ಆಧರಿಸಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದ್ದಾರೆ.</p>.<p>ಹೊಸ ಮಾರ್ಗಸೂಚಿಯ ಪ್ರಕಾರ, ಧಾರ್ಮಿಕ ಆಚರಣೆ ಮತ್ತು ಸಮಾರಂಭಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದರೆ, ತೆರೆದ ಪ್ರದೇಶದಲ್ಲಿ 200 ಜನ ಮೀರದಂತೆ ರಾಜಕೀಯ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡಲಾಗಿದೆ.</p>.<p>ಮದುವೆಗಳನ್ನು ತೆರೆದ ಪ್ರದೇಶದಲ್ಲಿ ನಡೆಸುವುದಾದರೆ 200 ಜನ ಮೀರಬಾರದು. ಕಲ್ಯಾಣ ಮಂಟಪ, ಸಭಾಂಗಣ, ಹಾಲ್ಗಳಲ್ಲಿ 100 ಜನ ಮೀರಬಾರದು. ಸಾಮಾಜಿಕ ಸಮಾರಂಭಗಳನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನ್ವಯ ವ್ಯಕ್ತಿಗಳ ನಡುವೆ 3.25 ಚದರಡಿ ಅಂತರ ಕಾಯ್ದುಕೊಂಡು ನಡೆಸಬಹುದು.</p>.<p>ಜನ್ಮದಿನ ಮತ್ತು ಇತರ ಆಚರಣೆಗಳು ತೆರೆದ ಪ್ರದೇಶದಲ್ಲಿ ನಡೆಸುವುದಾದರೆ 50 ಜನ ಮೀರಬಾರದು, ಸಭಾಂಗಣ ಮತ್ತು ಹಾಲ್ಗಳಲ್ಲಿ 25 ಜನ ಮೀರಬಾರದು. ನಿಧನದ ಸಂದರ್ಭದಲ್ಲಿ ತೆರೆದ ಪ್ರದೇಶದಲ್ಲಿ 50 ಜನ ಮತ್ತು ಮುಚ್ಚಿದ ಪ್ರದೇಶದಲ್ಲಿ 25 ಜನ ಮೀರಬಾರದು. ಶವಸಂಸ್ಕಾರ/ ಅಂತ್ಯಕ್ರಿಯೆಯಲ್ಲಿ 25 ಕ್ಕೂ ಹೆಚ್ಚುಜನ ಭಾಗವಹಿಸಬಾರದು ಎಂದು ತಿಳಿಸಿದೆ.</p>.<p>ಇತರ ಯಾವುದೇ ಸಮಾರಂಭದಲ್ಲಿ ಹಾಲ್ನ ವಿಸ್ತೀರ್ಣಕ್ಕೆ ಅನುಗುಣವಾಗಿ 50 ಕ್ಕೂ ಹೆಚ್ಚು ಜನ ಇರಬಾರದು. ಸಭಾಂಗಣ, ಕಲ್ಯಾಣ ಮಂಟಪ, ಸಿನಿಮಾಮಂದಿರ, ಹಾಲ್ಗಳು ಮತ್ತು ಆಚರಣೆಗೆ ಜನ ಸೇರುವ ಪ್ರದೇಶದಲ್ಲಿ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು.</p>.<p>ಈ ಆದೇಶವು ಬಿಬಿಎಂಪಿ ವ್ಯಾಪ್ತಿ ಮತ್ತು ಎಲ್ಲಾ ಜಿಲ್ಲೆಗಳಿಗೂ ಅನ್ವಯವಾಗುತ್ತದೆ. ಇದನ್ನು ಉಲ್ಲಂಘಿಸಿದರೆ ವಿಪತ್ತು ನಿರ್ವಹಣೆ ಕಾಯ್ದೆ 2005 ಸೆಕ್ಷನ್ 51 ರಿಂದ 60 ಅನ್ವಯ ಕ್ರಮ ಜರುಗಿಸಲು ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ.</p>.<p><strong>ಬಿಎಸ್ವೈಗೆ ಎರಡನೇ ಬಾರಿ ಕೋವಿಡ್</strong></p>.<p>ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಯಡಿಯೂರಪ್ಪ ಶುಕ್ರವಾರ ಎಂ.ಆರ್.ರಾಮಯ್ಯ ಆಸ್ಪತ್ರೆಯಲ್ಲಿ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಂಡರು.</p>.<p>ಈ ಹಿಂದೆ ಲಾಕ್ಡೌನ್ ಸಂದರ್ಭದಲ್ಲೂ ಸೋಂಕಿಗೆ ಒಳಗಾಗಿದ್ದರು. ಇದೀಗ ಎರಡನೇ ಬಾರಿ ಸೋಂಕಿಗೆ ಒಳಗಾಗಿದ್ದಾರೆ. ‘ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ’ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.</p>.<p><strong>20ಕ್ಕೆ ಮುಂದಿನ ತೀರ್ಮಾನ</strong></p>.<p>‘ಈ ಹಿಂದಿನ ನಿರ್ಧಾರದಂತೆ ಏಪ್ರಿಲ್ 20ರವರೆಗೂ ಎಂಟು ನಗರಗಳಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಯಲಿದೆ’ ಎಂದು ಯಡಿಯೂರಪ್ಪ ತಿಳಿಸಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಜ್ಞರು ವರದಿ ನೀಡಿದ್ದಾರೆ. ಎಂಟು ನಗರಗಳಲ್ಲಿ ರಾತ್ರಿ ಕರ್ಫ್ಯೂ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಬೇರೆ ಕಡೆಗಳಲ್ಲೂ ಜಾರಿಗೊಳಿಸುವ ಕುರಿತು ಉನ್ನತಮಟ್ಟದ ಸಭೆಯ ಬಳಿಕ ತೀರ್ಮಾನಕ್ಕೆ ಬರಲಾಗುವುದು’ ಎಂದರು.</p>.<p><strong>ಸರ್ವಪಕ್ಷಗಳ ಸಭೆ ರದ್ದು</strong></p>.<p>ಕೋವಿಡ್ ವಿಚಾರವಾಗಿ ಭಾನುವಾರ ನಡೆಯಬೇಕಿದ್ದ ಸರ್ವಪಕ್ಷಗಳ ನಾಯಕರ ಸಭೆಯನ್ನು ರದ್ದುಪಡಿಸಲಾಗಿದೆ. ಯಡಿಯೂರಪ್ಪ ಅವರು ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಕಾರಣ ಸಭೆ ಮುಂದೂಡಲಾಗಿದೆ.</p>.<p>ಕೋವಿಡ್ ಸ್ಥಿತಿಯನ್ನು ನಿಭಾಯಿಸಲು ವಿರೋಧ ಪಕ್ಷಗಳ ನಾಯಕರ ಸಲಹೆ ಸೂಚನೆಗಳನ್ನು ಪಡೆಯಲು ನಿರ್ಧರಿಸಲಾಗಿತ್ತು. ಒಂದು ಹಂತದಲ್ಲಿ ಆಸ್ಪತ್ರೆಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲು ಯಡಿಯೂರಪ್ಪ ತೀರ್ಮಾನಿಸಿದ್ದರು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>