ಬೆಂಗಳೂರು: ಬಿಜೆಪಿ ಹೊರತಾಗಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೆ ಕೋವಿಡ್ ಪರಿಸ್ಥಿತಿ ನಿಭಾಯಿಸುವುದು ಕಷ್ಟವಾಗುತ್ತಿತ್ತು. ಬಹುಕಾಲ ಆಳಿದ ಕಾಂಗ್ರೆಸ್ಗೆ ದೂರದೃಷ್ಟಿ ಇರಲಿಲ್ಲ. ಜನರ ತೆರಿಗೆಯನ್ನು ವಿವೇಚನೆಯಿಂದ ಬಳಸಿದ್ದರೆ ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಕಷ್ಟವಾಗುತ್ತಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ಈ ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರ ಹಾಗೂ ಪಕ್ಷವು ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಕಟೀಲ್ ಹೇಳಿಕೆಯನ್ನು ಬಿಜೆಪಿ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ. ದೇಶವನ್ನು ಬಹುಕಾಲ ಆಳಿದ ಕಾಂಗ್ರೆಸ್, ಜನರ ತೆರಿಗೆ ಹಣವನ್ನು ವಿವೇಚನೆಯಿಂದ ಬಳಸಿದ್ದರೆ ಕೊರೊನಾ ನಿಯಂತ್ರಿಸಲು ಕಷ್ಟವಾಗುತ್ತಿರಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ದೂರದೃಷ್ಟಿ ಇರಲಿಲ್ಲ. ದೇಶವನ್ನು ಲೂಟಿ ಮಾಡುವ ಯೋಚನೆ ಬಿಟ್ಟು ಮತ್ಯಾವ ಯೋಚನೆಯೂ ಇರಲಿಲ್ಲ ಎಂದು ಆರೋಪಿಸಿದ್ದಾರೆ.
ದೇಶವನ್ನು ಬಹುಕಾಲ ಆಳಿದ ಕಾಂಗ್ರೆಸ್, ಜನರ ತೆರಿಗೆ ಹಣವನ್ನು ವಿವೇಚನೆಯಿಂದ ಬಳಸಿದ್ದರೆ ಕೊರೋನಾ ನಿಯಂತ್ರಿಸಲು ಕಷ್ಟವಾಗುತ್ತಿರಲಿಲ್ಲ.
— BJP Karnataka (@BJP4Karnataka) May 16, 2021
ಕಾಂಗ್ರೆಸ್ ಪಕ್ಷಕ್ಕೆ ದೂರದೃಷ್ಟಿ ಇರಲಿಲ್ಲ. ದೇಶವನ್ನು ಲೂಟಿ ಮಾಡುವ ಯೋಚನೆ ಬಿಟ್ಟು ಮತ್ಯಾವ ಯೋಚನೆಯೂ ಇರಲಿಲ್ಲ.
ಶ್ರೀ @nalinkateel
ಬಿಜೆಪಿ ರಾಜ್ಯಾಧ್ಯಕ್ಷರು
1/4#NalinSpeaks
ಕೋವಿಡ್ ಪರಿಹಾರ ಕಾರ್ಯದಲ್ಲಿ ಸರ್ಕಾರ ಮತ್ತು ಪಕ್ಷ ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿದೆ. ಶಾಸಕರು, ಪಕ್ಷದ ಜಿಲ್ಲಾಧ್ಯಕ್ಷರು ಸೇರಿ ಜಿಲ್ಲೆಗಳಲ್ಲಿ ವಾರ್ರೂಮ್ ತೆರೆದಿದ್ದೇವೆ. ಇಲ್ಲಿಗೆ ಬರುವ ಕರೆಗಳನ್ನು ಜಿಲ್ಲಾಡಳಿತ, ಉಸ್ತುವಾರಿ ಸಚಿವರಿಗೆ ತಲುಪಿಸುವ ಕೆಲಸ ಸೇರಿದಂತೆ 13 ಅಂಶಗಳನ್ನೊಳಗೊಂಡ ಸೇವೆ ಮಾಡಲಾಗುತ್ತಿದೆ ಎಂದು ಸಮರ್ಥಿಸಿದ್ದಾರೆ.
ಕೋವಿಡ್ ಪರಿಹಾರ ಕಾರ್ಯದಲ್ಲಿ ಸರ್ಕಾರ & ಪಕ್ಷ ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿದೆ. ಶಾಸಕರು, ಪಕ್ಷದ ಜಿಲ್ಲಾಧ್ಯಕ್ಷರು ಸೇರಿ ಜಿಲ್ಲೆಗಳಲ್ಲಿ ವಾರ್ರೂಮ್ ತೆರೆದಿದ್ದೇವೆ. ಇಲ್ಲಿಗೆ ಬರುವ ಕರೆಗಳನ್ನು ಜಿಲ್ಲಾಡಳಿತ, ಉಸ್ತುವಾರಿ ಸಚಿವರಿಗೆ ತಲುಪಿಸುವ ಕೆಲಸ ಸೇರಿದಂತೆ 13 ಅಂಶಗಳನ್ನೊಳಗೊಂಡ ಸೇವೆ ಮಾಡಲಾಗುತ್ತಿದೆ.
— BJP Karnataka (@BJP4Karnataka) May 16, 2021
2/4#NalinSpeaks
ಕೋವಿಡ್ ನಿಯಂತ್ರಣಕ್ಕಾಗಿ ಪಕ್ಷ ಹಾಗೂ ಸರ್ಕಾರ ಒಂದಾಗಿ ಸೇವೆ ಸಲ್ಲಿಸುತ್ತಿದ್ದು, ಸೇವೆಯೇ ನಮ್ಮ ಪರಮ ಧ್ಯೇಯ. ಮಾತು ಕಡಿಮೆ, ಕೆಲಸ ಹೆಚ್ಚು ಮಾಡುವುದೇ ನಮ್ಮ ಗುರಿ. ನಮ್ಮ ನಿಯತ್ತು ನಿಷ್ಠೆಯಲ್ಲಿ ಕೊರತೆ ಇಲ್ಲದಂತೆ ಕಾರ್ಯನಿರ್ವಹಿಸುತ್ತಿದ್ದೇವೆ. ಜನರ ಪ್ರಾಣ ರಕ್ಷಣೆಯೇ ನಮ್ಮ ಪ್ರಥಮ ಆದ್ಯತೆ ಎಂದು ಹೇಳಿದ್ದಾರೆ.
ಕೋವಿಡ್ ನಿಯಂತ್ರಣಕ್ಕಾಗಿ ಪಕ್ಷ ಹಾಗೂ ಸರ್ಕಾರ ಒಂದಾಗಿ ಸೇವೆ ಸಲ್ಲಿಸುತ್ತಿದ್ದು, ಸೇವೆಯೇ ನಮ್ಮ ಪರಮ ಧ್ಯೇಯ. ಮಾತು ಕಡಿಮೆ, ಕೆಲಸ ಹೆಚ್ಚು ಮಾಡುವುದೇ ನಮ್ಮ ಗುರಿ.
— BJP Karnataka (@BJP4Karnataka) May 16, 2021
ನಮ್ಮ ನಿಯತ್ತು ನಿಷ್ಠೆಯಲ್ಲಿ ಕೊರತೆ ಇಲ್ಲದಂತೆ ಕಾರ್ಯನಿರ್ವಹಿಸುತ್ತಿದ್ದೇವೆ. ಜನರ ಪ್ರಾಣ ರಕ್ಷಣೆಯೇ ನಮ್ಮ ಪ್ರಥಮ ಆದ್ಯತೆ.
3/4#NalinSpeaks
ಸರ್ಕಾರ ಕೈಗೊಳ್ಳುತ್ತಿರುವ ನಿರ್ಣಯಗಳು ನೂರಕ್ಕೆ ನೂರು ಸರಿದಾರಿಯಲ್ಲಿದೆ. ಕೋವಿಡ್ ವಿಷಮ ಪರಿಸ್ಥಿತಿಯಲ್ಲಿ ಬೇರಾವುದೇ ಪಕ್ಷ ಅಧಿಕಾರದಲ್ಲಿದ್ದಿದ್ದರೆ ಪರಿಸ್ಥಿತಿ ನಿಭಾವಣೆ ಕಷ್ಟವಿತ್ತು. ಕಾಂಗ್ರೆಸ್ ಆಡಳಿತದಲ್ಲಿ ದೇಶದಲ್ಲಿ ಕೇವಲ 2 ಏಮ್ಸ್ ಇದ್ದವು, ಮೋದಿ ಸರ್ಕಾರ ಕೇವಲ 7 ವರ್ಷದಲ್ಲಿ 9 ಏಮ್ಸ್ ಸ್ಥಾಪಿಸಿದ್ದಾರೆ ಎಂದು ರಾಜ್ಯಾಧ್ಯಕ್ಷರ ಹೇಳಿಕೆಯನ್ನು ಬಿಜೆಪಿ ಉಲ್ಲೇಖಿಸಿದೆ.
ಸರ್ಕಾರ ಕೈಗೊಳ್ಳುತ್ತಿರುವ ನಿರ್ಣಯಗಳು ನೂರಕ್ಕೆ ನೂರು ಸರಿದಾರಿಯಲ್ಲಿದೆ. ಕೋವಿಡ್ ವಿಷಮ ಪರಿಸ್ಥಿತಿಯಲ್ಲಿ ಬೇರಾವುದೇ ಪಕ್ಷ ಅಧಿಕಾರದಲ್ಲಿದ್ದಿದ್ದರೆ ಪರಿಸ್ಥಿತಿ ನಿಭಾವಣೆ ಕಷ್ಟವಿತ್ತು.
— BJP Karnataka (@BJP4Karnataka) May 16, 2021
ಕಾಂಗ್ರೆಸ್ ಆಡಳಿತದಲ್ಲಿ ದೇಶದಲ್ಲಿ ಕೇವಲ 2 ಏಮ್ಸ್ ಇದ್ದವು, ಮೋದಿ ಸರ್ಕಾರ ಕೇವಲ 7 ವರ್ಷದಲ್ಲಿ 9 ಏಮ್ಸ್ ಸ್ಥಾಪಿಸಿದ್ದಾರೆ.
4/4#NalinSpeaks
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.