ರಾಜ್ಯದಲ್ಲಿ ಲಸಿಕೆ ಕೊರತೆ ಇರುವ ಬಗ್ಗೆ ಮಹಾರಾಷ್ಟ್ರದ ಸಚಿವ ಅಸ್ಲಾಮ್ ಶೇಕ್ ಹೇಳಿದ್ದರು. ಅವರು, ʼಲಸಿಕೆ ವಿತರಣೆ ವಿಚಾರದಲ್ಲಿಕೇಂದ್ರವು ರಾಜಕೀಯ ಮಾಡುತ್ತಿದೆ. ಈ ಮೊದಲು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ವಿತರಣಾ ಕೇಂದ್ರಗಳನ್ನು ತೆರೆಯಲಾಯಿತು. ಸಾಧ್ಯವಾದಷ್ಟು ಗರಿಷ್ಠ ಪ್ರಮಾಣದಲ್ಲಿ ಜನರಿಗೆ ಲಸಿಕೆ ವಿತರಿಸಲಾಗುವುದು ಎಂದು ನಾವು ಹೇಳಿದ್ದೆವು. ಆದರೆ, ಮಹಾರಾಷ್ಟ್ರಕ್ಕೆ ಕನಿಷ್ಠ ಪ್ರಮಾಣದಲ್ಲಿ ಲಸಿಕೆ ಪೂರೈಸಲಾಗಿದೆ. ಇಂದು ರಾಜ್ಯದಾದ್ಯಂತ ಇರುವ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಕೊರತೆ ಇದ್ದು, ಮುಚ್ಚುವ ಸ್ಥಿತಿಯಲ್ಲಿವೆʼ ಎಂದು ಮಾಧ್ಯಮದವರಿಗೆ ಹೇಳಿದ್ದರು.