ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಕೋವಿಡ್–19 ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ.ಈ ವಿಷಯವನ್ನು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಟ್ವಿಟರ್ ಮೂಲಕ ತಿಳಿಸಿದ್ದಾರೆ.
ಶ್ರೀರಾಮುಲು ಅವರು,‘ನನ್ನ ಪ್ರಾಣ ಸ್ನೇಹಿತ ಶ್ರೀ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ನನ್ನ ಪ್ರೀತಿಯ ಗೆಳೆಯ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.
ನನ್ನ ಪ್ರಾಣ ಸ್ನೇಹಿತ ಶ್ರೀ ಗಾಲಿ ಜನಾರ್ಧನ ರೆಡ್ಡಿ ಅವರಿಗೆ ಕೊರೊನ ಸೋಂಕು ದೃಢಪಟ್ಟಿದೆ. ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.