ಬೆಂಗಳೂರು: ರಾಜ್ಯದಾದ್ಯಂತ ಸೋಮವಾರ ಒಂದೇ ದಿನ 7,238 ಗುಣಮುಖರಾಗಿದ್ದು 6,495 ಜನರಿಗೆ ಸೋಂಕು ತಗುಲಿದೆ.
ರಾಜ್ಯದಲ್ಲಿ ಇಲ್ಲಿಯವರೆಗೂ 2,49,467 ಮಂದಿ ಚೇತರಿಸಿಕೊಂಡು ಮನೆಗೆ ಮರಳಿದ್ದಾರೆ.
ಇಂದು 6,495 ಹೊಸ ಪ್ರಕರಣಗಳು ವರದಿಯಾಗಿದ್ದು, 113 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
6,495 new COVID-19 cases, 7,238 discharges and 113 deaths reported in Karnataka in the last 24 hours, taking total cases to 3,42,423 including 2,49,467 discharges and 5,702 deaths: State Health Department pic.twitter.com/ydr5wIKVjk
ಇದರೊಂದಿಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 3,42,423 ಕ್ಕೆ ಏರಿಕೆಯಾಗಿದೆ. ಇದುವರೆಗೆ 5,702 ಮಂದಿ ಸಾವಿಗೀಡಾಗಿದ್ದಾರೆ.
ಬೆಂಗಳೂರಿನಲ್ಲಿ ಇಂದು 1,862 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 27 ಮಂದಿ ಮೃತಪಟ್ಟಿದ್ದಾರೆ. ಸದ್ಯ ರಾಜದಾದ್ಯಂತ 87,235 ಪ್ರಕರಣಗಳಿದ್ದು, ಐಸಿಯುನಲ್ಲಿ 747 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರಿನಲ್ಲಿ 405, ಬಳ್ಳಾರಿ 365, ದಾವಣಗೆರೆ 257, ಬೆಳಗಾವಿ 154, ದಕ್ಷಿಣ ಕನ್ನಡ 270, ತುಮಕೂರು 316, ಧಾರವಾಡ 279, ಶಿವಮೊಗ್ಗ 168, ಹಾಸನ 217, ಉಡುಪಿ 83, ಕಲಬುರ್ಗಿ 161, ಗದಗದಲ್ಲಿ 178 ಹೊಸ ಪ್ರಕರಣಗಳು ದೃಢಪಟ್ಟಿವೆ.
ಸೋಮವಾರ ಒಂದೇ ದಿನ ಒಟ್ಟು 43,132 ಮಂದಿಗೆ ಕೋವಿಡ್–19 ಮಾದರಿ ಪರೀಕ್ಷೆ ನಡೆಸಲಾಗಿದ್ದು, ಇದುವರೆಗೆ ಒಟ್ಟು 28,95,807 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.