ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ಒಂದೇ ದಿನ 6,495 ಮಂದಿಗೆ ಸೋಂಕು, 7238 ಜನ ಗುಣಮುಖ

Last Updated 31 ಆಗಸ್ಟ್ 2020, 14:38 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಾದ್ಯಂತ ಸೋಮವಾರ ಒಂದೇ ದಿನ 7,238 ಗುಣಮುಖರಾಗಿದ್ದು 6,495 ಜನರಿಗೆ ಸೋಂಕು ತಗುಲಿದೆ.

ರಾಜ್ಯದಲ್ಲಿ ಇಲ್ಲಿಯವರೆಗೂ 2,49,467 ಮಂದಿ ಚೇತರಿಸಿಕೊಂಡು ಮನೆಗೆ ಮರಳಿದ್ದಾರೆ.

ಇಂದು 6,495 ಹೊಸ ಪ್ರಕರಣಗಳು ವರದಿಯಾಗಿದ್ದು, 113 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 3,42,423 ಕ್ಕೆ ಏರಿಕೆಯಾಗಿದೆ. ಇದುವರೆಗೆ 5,702 ಮಂದಿ ಸಾವಿಗೀಡಾಗಿದ್ದಾರೆ.

ಬೆಂಗಳೂರಿನಲ್ಲಿ ಇಂದು 1,862 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 27 ಮಂದಿ ಮೃತಪಟ್ಟಿದ್ದಾರೆ. ಸದ್ಯ ರಾಜದಾದ್ಯಂತ 87,235 ಪ್ರಕರಣಗಳಿದ್ದು, ಐಸಿಯುನಲ್ಲಿ 747 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೈಸೂರಿನಲ್ಲಿ 405, ಬಳ್ಳಾರಿ 365, ದಾವಣಗೆರೆ 257, ಬೆಳಗಾವಿ 154, ದಕ್ಷಿಣ ಕನ್ನಡ 270, ತುಮಕೂರು 316, ಧಾರವಾಡ 279, ಶಿವಮೊಗ್ಗ 168, ಹಾಸನ 217, ಉಡುಪಿ 83, ಕಲಬುರ್ಗಿ 161, ಗದಗದಲ್ಲಿ 178 ಹೊಸ ಪ್ರಕರಣಗಳು ದೃಢಪಟ್ಟಿವೆ.

ಸೋಮವಾರ ಒಂದೇ ದಿನ ಒಟ್ಟು 43,132 ಮಂದಿಗೆ ಕೋವಿಡ್–19 ಮಾದರಿ‌ ಪರೀಕ್ಷೆ ನಡೆಸಲಾಗಿದ್ದು, ಇದುವರೆಗೆ ಒಟ್ಟು 28,95,807 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT