ಜನವರಿ 16ರಿಂದ ಕೊರೊನಾ ಲಸಿಕೆ ವಿತರಣೆ ಕಾರ್ಯಕ್ರಮವು ಪ್ರಾರಂಭವಾಗಲಿದೆ. ಇದರ ಪೂರ್ವ ಸಿದ್ಧತೆಯಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಸಂವಾದ ನಡೆಸಿದರು. ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಹ ಸಭೆಯಲ್ಲಿ ಪಾಲ್ಗೊಂಡರು.
ಮೊದಲ ಹಂತದಲ್ಲಿ 6.3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ರಾಜ್ಯ ಸಜ್ಜಾಗಿದೆ ಎಂದು ಆರೋಗ್ಯಸಚಿವ ಡಾ. ಸುಧಾಕರ್ ಕೆಮಾಹಿತಿ ನೀಡಿದರು.