ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update | 80,281ಸೋಂಕಿತರು ಗುಣಮುಖ; 75,068ಸಕ್ರಿಯ ಪ್ರಕರಣ

Last Updated 6 ಆಗಸ್ಟ್ 2020, 15:55 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದಲ್ಲಿ ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಸಂಜೆ 5ರ ವರೆಗೆ ಒಟ್ಟು 6,805ಕೋವಿಡ್‌–19 ಸೋಂಕು ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 93 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,58,254ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2,897ಕ್ಕೆ ತಲುಪಿದೆ.ಕಳೆದ 24 ಗಂಟೆಗಳಲ್ಲಿ5,602 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಚೇತರಿಸಿಕೊಂಡವರ ಸಂಖ್ಯೆ80,281ಕ್ಕೆ ಹೆಚ್ಚಾಗಿದೆ. ಇನ್ನೂ 75,068 ಪ್ರಕರಣಗಳು ಸಕ್ರಿಯವಾಗಿವೆ.671 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ಹೊಸದಾಗಿ 2,544 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ನಗರದಲ್ಲಿಸೋಂಕಿತರ ಸಂಖ್ಯೆ 67,425ಕ್ಕೆ ಏರಿಕೆಯಾಗಿದೆ. ಇದರಲ್ಲಿ 33,932 ಸೋಂಕಿತರುಗುಣಮುಖರಾಗಿ ಬಿಡುಗಡೆಯಾಗಿದ್ದು, ಇನ್ನೂ 32,314 ಪ್ರಕರಣಗಳು ಸಕ್ರಿಯವಾಗಿವೆ.

ಉಳಿದಂತೆ ಬಳ್ಳಾರಿಯಲ್ಲಿ 431, ಮೈಸೂರಿನಲ್ಲಿ 361, ಶಿವಮೊಗ್ಗದಲ್ಲಿ 292, ಬೆಳಗಾವಿಯಲ್ಲಿ 229, ಉಡುಪಿಯಲ್ಲಿ 217 ಧಾರವಾಡದಲ್ಲಿ 212ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT