ಮಾ.8ರಂದು ರಾಜ್ಯದಲ್ಲಿ ಪ್ರಥಮ ಕೋವಿಡ್ ಪ್ರಕರಣ ವರದಿಯಾಗಿತ್ತು. ನಾಲ್ಕು ಹಂತಗಳ ಲಾಕ್ಡೌನ್ ಅಂತ್ಯವಾಗುವ ವೇಳೆ ಮಹಾರಾಷ್ಟ್ರ, ದೆಹಲಿ ಸೇರಿದಂತೆ ದೇಶದ ಕೆಲ ರಾಜ್ಯಗಳಲ್ಲಿ ಪ್ರಕರಣಗಳು ಏರುಗತಿ ಕಂಡಿದ್ದರೂ ರಾಜ್ಯದಲ್ಲಿ ಮಾತ್ರ ನಿಯಂತ್ರಣದಲ್ಲಿತ್ತು. ಆ ವೇಳೆಗೆ ಇಲ್ಲಿ 3,221 ಮಂದಿ ಮಾತ್ರ ಸೋಂಕಿತರಾಗಿದ್ದರು. ಹೀಗಾಗಿಯೇ ಕೇಂದ್ರ ಆರೋಗ್ಯ ಸಚಿವಾಲಯ ಕೂಡ ಇಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಿಪಡಿಸಿ, ಉಳಿದ ರಾಜ್ಯಗಳಿಗೆ ಅನುಸರಿಸಲು ಸೂಚಿಸಿತ್ತು. ಆದರೆ, ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಸಿದಂತೆ ಸೋಂಕು ಹರಡುವಿಕೆ ವೇಗ ಪಡೆದುಕೊಂಡಿತು.