<p><strong>ಬೆಂಗಳೂರು: </strong>ರಾಜ್ಯದಲ್ಲಿ ಶುಕ್ರವಾರದಂದು 967 ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<p>ಗುರುವಾರದಂದು 1,000ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿದ್ದವು. ಈ ಮೂಲಕ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಂಡಿದೆ.</p>.<p>ರಾಜ್ಯದಲ್ಲಿ ಕೋವಿಡ್-19 ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 29,60,131ಕ್ಕೆ ತಲುಪಿದೆ.</p>.<p>ಕಳೆದ 24 ತಾಸಿನ ಅವಧಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಇಂದಿನವರೆಗೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,472 ಆಗಿದೆ.</p>.<p>ಶುಕ್ರವಾರದಂದು ಆಸ್ಪತ್ರೆಯಿಂದ 921 ಮಂದಿ ಬಿಡುಗಡೆ ಹೊಂದಿದ್ದಾರೆ. ಆ ಮೂಲಕ ಇದುವರೆಗೆ 29,05,604 ಮಂದಿ ಕೊರೊನಾ ವೈರಾಣುವಿನಿಂದ ಮುಕ್ತಿ ಪಡೆದಿದ್ದಾರೆ.</p>.<p>ರಾಜ್ಯದಲ್ಲಿ 17,028 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ. 0.57 ರಷ್ಟಿದ್ದು, ಮರಣ ಪ್ರಮಾಣ ಶೇ. 1.03 ಆಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಬೆಂಗಳೂರಿನಲ್ಲೂ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು 310 ಮಂದಿಯಲ್ಲಿ ಸೋಂಕು ದೃಢಪಟ್ಟಿವೆ. ಇನ್ನುಳಿದಂತೆ ದಕ್ಷಿಣ ಕನ್ನಡ 141, ಉಡುಪಿ 96, ಕೊಡಗು 74, ಹಾಸನ 61 ಮತ್ತು ಮೈಸೂರು ಜಿಲ್ಲೆಯಲ್ಲಿ 55 ಹೊಸ ಪ್ರಕರಣಗಳು ವರದಿಯಾಗಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಶುಕ್ರವಾರದಂದು 967 ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.</p>.<p>ಗುರುವಾರದಂದು 1,000ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿದ್ದವು. ಈ ಮೂಲಕ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖ ಕಂಡಿದೆ.</p>.<p>ರಾಜ್ಯದಲ್ಲಿ ಕೋವಿಡ್-19 ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 29,60,131ಕ್ಕೆ ತಲುಪಿದೆ.</p>.<p>ಕಳೆದ 24 ತಾಸಿನ ಅವಧಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಇಂದಿನವರೆಗೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,472 ಆಗಿದೆ.</p>.<p>ಶುಕ್ರವಾರದಂದು ಆಸ್ಪತ್ರೆಯಿಂದ 921 ಮಂದಿ ಬಿಡುಗಡೆ ಹೊಂದಿದ್ದಾರೆ. ಆ ಮೂಲಕ ಇದುವರೆಗೆ 29,05,604 ಮಂದಿ ಕೊರೊನಾ ವೈರಾಣುವಿನಿಂದ ಮುಕ್ತಿ ಪಡೆದಿದ್ದಾರೆ.</p>.<p>ರಾಜ್ಯದಲ್ಲಿ 17,028 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ. 0.57 ರಷ್ಟಿದ್ದು, ಮರಣ ಪ್ರಮಾಣ ಶೇ. 1.03 ಆಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p>ಬೆಂಗಳೂರಿನಲ್ಲೂ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು 310 ಮಂದಿಯಲ್ಲಿ ಸೋಂಕು ದೃಢಪಟ್ಟಿವೆ. ಇನ್ನುಳಿದಂತೆ ದಕ್ಷಿಣ ಕನ್ನಡ 141, ಉಡುಪಿ 96, ಕೊಡಗು 74, ಹಾಸನ 61 ಮತ್ತು ಮೈಸೂರು ಜಿಲ್ಲೆಯಲ್ಲಿ 55 ಹೊಸ ಪ್ರಕರಣಗಳು ವರದಿಯಾಗಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>