ಶುಕ್ರವಾರದಂದು ಆಸ್ಪತ್ರೆಯಿಂದ 921 ಮಂದಿ ಬಿಡುಗಡೆ ಹೊಂದಿದ್ದಾರೆ. ಆ ಮೂಲಕ ಇದುವರೆಗೆ 29,05,604 ಮಂದಿ ಕೊರೊನಾ ವೈರಾಣುವಿನಿಂದ ಮುಕ್ತಿ ಪಡೆದಿದ್ದಾರೆ.
ರಾಜ್ಯದಲ್ಲಿ 17,028 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇ. 0.57 ರಷ್ಟಿದ್ದು, ಮರಣ ಪ್ರಮಾಣ ಶೇ. 1.03 ಆಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲೂ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಇಂದು 310 ಮಂದಿಯಲ್ಲಿ ಸೋಂಕು ದೃಢಪಟ್ಟಿವೆ. ಇನ್ನುಳಿದಂತೆ ದಕ್ಷಿಣ ಕನ್ನಡ 141, ಉಡುಪಿ 96, ಕೊಡಗು 74, ಹಾಸನ 61 ಮತ್ತು ಮೈಸೂರು ಜಿಲ್ಲೆಯಲ್ಲಿ 55 ಹೊಸ ಪ್ರಕರಣಗಳು ವರದಿಯಾಗಿವೆ.