ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಏರುಗತಿ ಪಡೆದಿದ್ದು, 4,246 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಬುಧವಾರ ದೃಢಪಟ್ಟಿದೆ.
ಒಂದು ದಿನದ ಅವಧಿಯಲ್ಲಿ 1.27 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ.ಸೋಂಕು ದೃಢ ಪ್ರಮಾಣ ಶೇ 3.33ಕ್ಕೆ ತಲುಪಿದೆ. ರಾಜ್ಯದ 26 ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೊಸದಾಗಿ ಪತ್ತೆಯಾಗಿವೆ. 15 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 8 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಹಾವೇರಿಯಲ್ಲಿ ಹೊಸ ಪ್ರಕರಣ ವರದಿಯಾಗಿಲ್ಲ.
ಬೆಂಗಳೂರಿನಲ್ಲಿ 3,605 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಸೋಂಕು ದೃಢ ಪ್ರಮಾಣವುಶೇ 6.45ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ವರದಿಯಾದ ಹೊಸ ಪ್ರಕರಣಗಳಲ್ಲಿ ಶೇ 85 ರಷ್ಟು ಸೋಂಕಿತರು ರಾಜಧಾನಿಯಲ್ಲಿಯೇ ಪತ್ತೆಯಾಗಿದ್ದಾರೆ.
ದಕ್ಷಿಣ ಕನ್ನಡದಲ್ಲಿ 111,ಉಡುಪಿಯಲ್ಲಿ 88, ಮೈಸೂರಿನಲ್ಲಿ 59, ತುಮಕೂರಿನಲ್ಲಿ 43, ಮಂಡ್ಯದಲ್ಲಿ 36, ಬಳ್ಳಾರಿಯಲ್ಲಿ 34 ಹಾಗೂ ಬೆಳಗಾವಿಯಲ್ಲಿ 31 ಪ್ರಕರಣಗಳು ವರದಿಯಾಗಿವೆ.ಉಳಿದಜಿಲ್ಲೆಗಳಲ್ಲಿಹೊಸ ಪ್ರಕರಣಗಳು 30ಕ್ಕಿಂತ ಕಡಿಮೆ ಇವೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 30.17 ಲಕ್ಷ ದಾಟಿದೆ.
ಸೋಂಕಿತರಲ್ಲಿ 362 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.61 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, 17,414 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ 11,762 ಸಕ್ರಿಯ ಪ್ರಕರಣಗಳಿವೆ. ದಕ್ಷಿಣ ಕನ್ನಡದಲ್ಲಿ ಸೋಂಕಿತರ ಸಂಖ್ಯೆ 441ಕ್ಕೆ ಏರಿಕೆಯಾಗಿದೆ. ಉಡುಪಿ, ಮೈಸೂರು ಸೇರಿದಂತೆ 10 ಜಿಲ್ಲೆಗಳಲ್ಲಿ 100ಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿವೆ.
ಇದನ್ನೂ ಓದಿ:ಓಮೈಕ್ರಾನ್ನಿಂದ ದೇಶದಲ್ಲಿ ಮೊದಲ ಸಾವು
ಕೋವಿಡ್ಪೀಡಿತರಲ್ಲಿ ಬೆಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದಾರೆ.ರಾಜ್ಯದಲ್ಲಿ ಮರಣ ಪ್ರಮಾಣ ದರವು ಶೇ 0.04 ರಷ್ಟು ಇದೆ. ಈವರೆಗೆಕೋವಿಡ್ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,357ಕ್ಕೆ ಏರಿಕೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.