ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 381 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 7 ಜನರು ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಅಕ್ಟೋಬರ್ 28ಕ್ಕೆ ಕೊನೆಗೊಂಡಂತೆ ಒಂದು ದಿನದಲ್ಲಿ 12.84 ಲಕ್ಷ ಮಾದರಿ ಪರೀಕ್ಷೆ ಮಾಡಲಾಗಿದೆ. ಈ ಮೂಲಕ ಈವರೆಗೆ 60.58 ಕೋಟಿ ಜನರಿಗೆ ಪರೀಕ್ಷೆ ನಡೆಸಲಾಗಿದೆ. ಸೋಂಕು ದೃಢ ಪ್ರಮಾಣವು ಶೇ 0.33 ರಷ್ಟಿದೆ. ಮರಣ ಪ್ರಮಾಣ ಶೇ 1.83ರಷ್ಟಿದೆ.
6 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 13 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಬೀದರ್ ಮತ್ತು ಚಾಮರಾಜನಗರ ಸೇರಿದಂತೆ 9 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ.
ಇಂದಿನ 29/10/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/5HN12Uyw3m @cmofKarnataka @mla_sudhakar @Comm_dhfwka @HubballiRailway@KodaguConnect @IChangeMyCity@WeAreBangalore @bangalore@Belagavi_infra @PIBBengaluru @KarnatakaVarthe pic.twitter.com/GdOqpaynQe
— K'taka Health Dept (@DHFWKA) October 29, 2021
ಬೆಂಗಳೂರಿನಲ್ಲಿ 179 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 50ರ ಗಡಿಯೊಳಗೆ ಇವೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 29.87 ಲಕ್ಷಕ್ಕೆ ಏರಿಕೆಯಾಗಿದೆ.
ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 8,626ಕ್ಕೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಗರಿಷ್ಠ (6,543) ಸಕ್ರಿಯ ಪ್ರಕರಣಗಳಿವೆ. ಸೋಂಕಿತರಲ್ಲಿ 125 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಾದ್ಯಂತ ಗುಣಮುಖರಾದವರ ಒಟ್ಟು ಸಂಖ್ಯೆ 29.40 ಲಕ್ಷ ದಾಟಿದೆ.
COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes @PIB_India @mygovindia @COVIDNewsByMIB #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/F2Z1uAUwiJ
— ICMR (@ICMRDELHI) October 29, 2021
ಬೆಂಗಳೂರಿನಲ್ಲಿ ನಾಲ್ಕು ಮಂದಿ, ಚಿಕ್ಕಬಳ್ಳಾಪುರ, ಧಾರವಾಡ ಮತ್ತು ದಕ್ಷಿಣ ಕನ್ನಡದಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಈವರೆಗೆ ಕೋವಿಡ್ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,061ಕ್ಕೆ ಏರಿಕೆಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.