<p><strong>ಬೆಂಗಳೂರು: </strong>ಕೊರೊನಾ ಸೋಂಕಿತರ ಪೈಕಿ ಮಂಗಳವಾರ 29 ಮಂದಿ ಅಸುನೀಗಿದ್ದಾರೆ. ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ನಂತರ ವರದಿಯಾದ ಕನಿಷ್ಠ ಪ್ರಕರಣ ಇದಾಗಿದೆ. ಇದರೊಂದಿಗೆ ಮರಣ ಪ್ರಮಾಣ ದರ ಶೇ 1.98ಕ್ಕೆ ಇಳಿದಿದೆ.</p>.<p>ಏಪ್ರಿಲ್ ಎರಡನೇ ವಾರದ ನಂತರ ರಾಜ್ಯದಲ್ಲಿ ಮೃತರ ಸಂಖ್ಯೆ 50ರ ಗಡಿ ದಾಟಿತ್ತು. ಬಳಿಕ ಏರಿಕೆ ಕಂಡು 500ರ ಗಡಿ ತಲುಪಿತ್ತು. ಆದರೆ ಹಿಂದಿನ ಒಂದು ತಿಂಗಳಿನಿಂದ ಈ ಸಂಖ್ಯೆ ಇಳಿಮುಖವಾಗಿದೆ. ಇದುವರೆಗೆ ಒಟ್ಟು 36,226 ಜನ ಈ ರೋಗದಿಂದ ಪ್ರಾಣ ಕಳೆದುಕೊಂಡಿದ್ದಾರೆ.</p>.<p>ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಿದೆ. ಒಂದು ದಿನದಲ್ಲಿ ಹೊಸದಾಗಿ 1,464 ಜನರಿಗೆ ಸೋಂಕು ತಗುಲಿದೆ. ಹೀಗಾಗಿ ಸೋಂಕು ದೃಢ ಪ್ರಮಾಣವು ಶೇ 1.29ಕ್ಕೆ ಏರಿದೆ.</p>.<p>ಹಿಂದಿನ 24 ಗಂಟೆಗಳಲ್ಲಿ 2,706 ಮಂದಿಗೆ ಕಾಯಿಲೆ ವಾಸಿಯಾಗಿದ್ದು, ಚೇತರಿಸಿಕೊಂಡವರ ಒಟ್ಟು ಸಂಖ್ಯೆ 28.24 ಲಕ್ಷಕ್ಕೆ ಹೆಚ್ಚಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿದಿದೆ. ಸದ್ಯ 26,256 ಮಂದಿ ಆಸ್ಪತ್ರೆ ಸೇರಿ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಜಿಲ್ಲೆಗಳಲ್ಲೂ ಮೃತರ ಸಂಖ್ಯೆ ಇಳಿದಿದೆ. ಬೆಂಗಳೂರಿನಲ್ಲಿ 5 ಜನ ಅಸುನೀಗಿದ್ದಾರೆ. ದಕ್ಷಿಣ ಕನ್ನಡ, ಹಾಸನ ಮತ್ತು ಮೈಸೂರಿನಲ್ಲಿ ತಲಾ 3, ಹಾವೇರಿ, ಕೋಲಾರ, ಮಂಡ್ಯ ಹಾಗೂ ತುಮಕೂರಿನಲ್ಲಿ ತಲಾ 2 ಮರಣ ಪ್ರಕರಣಗಳು ವರದಿಯಾಗಿವೆ.</p>.<p>ಬೆಂಗಳೂರಿನಲ್ಲಿ ಹೊಸದಾಗಿ 352 ಜನರಿಗೆ ಸೋಂಕು ತಗುಲಿದೆ. ದಕ್ಷಿಣ ಕನ್ನಡ, ಹಾಸನ ಹಾಗೂ ಮೈಸೂರಿನಲ್ಲಿ ಕ್ರಮವಾಗಿ 200, 108 ಮತ್ತು 117 ಮಂದಿ ಸೋಂಕಿತರಾಗಿದ್ದಾರೆ. 14 ಜಿಲ್ಲೆಗಳಲ್ಲಿ ಈ ಸಂಖ್ಯೆ ಎರಡಂಕಿಯಷ್ಟಿದೆ. ರಾಜ್ಯದಲ್ಲಿ ಈವರೆಗೆ 28.86 ಲಕ್ಷ ಜನ ಸೋಂಕಿಗೊಳಪಟ್ಟಂತಾಗಿದೆ.</p>.<p>ಕೋವಿಡ್ ಪರೀಕ್ಷೆಗಳನ್ನು ಮತ್ತಷ್ಟು ಇಳಿಸಲಾಗಿದೆ. ಒಂದು ದಿನದಲ್ಲಿ 1.13 ಲಕ್ಷ ಮಂದಿಯ ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೊರೊನಾ ಸೋಂಕಿತರ ಪೈಕಿ ಮಂಗಳವಾರ 29 ಮಂದಿ ಅಸುನೀಗಿದ್ದಾರೆ. ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಕಾಣಿಸಿಕೊಂಡ ನಂತರ ವರದಿಯಾದ ಕನಿಷ್ಠ ಪ್ರಕರಣ ಇದಾಗಿದೆ. ಇದರೊಂದಿಗೆ ಮರಣ ಪ್ರಮಾಣ ದರ ಶೇ 1.98ಕ್ಕೆ ಇಳಿದಿದೆ.</p>.<p>ಏಪ್ರಿಲ್ ಎರಡನೇ ವಾರದ ನಂತರ ರಾಜ್ಯದಲ್ಲಿ ಮೃತರ ಸಂಖ್ಯೆ 50ರ ಗಡಿ ದಾಟಿತ್ತು. ಬಳಿಕ ಏರಿಕೆ ಕಂಡು 500ರ ಗಡಿ ತಲುಪಿತ್ತು. ಆದರೆ ಹಿಂದಿನ ಒಂದು ತಿಂಗಳಿನಿಂದ ಈ ಸಂಖ್ಯೆ ಇಳಿಮುಖವಾಗಿದೆ. ಇದುವರೆಗೆ ಒಟ್ಟು 36,226 ಜನ ಈ ರೋಗದಿಂದ ಪ್ರಾಣ ಕಳೆದುಕೊಂಡಿದ್ದಾರೆ.</p>.<p>ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಿದೆ. ಒಂದು ದಿನದಲ್ಲಿ ಹೊಸದಾಗಿ 1,464 ಜನರಿಗೆ ಸೋಂಕು ತಗುಲಿದೆ. ಹೀಗಾಗಿ ಸೋಂಕು ದೃಢ ಪ್ರಮಾಣವು ಶೇ 1.29ಕ್ಕೆ ಏರಿದೆ.</p>.<p>ಹಿಂದಿನ 24 ಗಂಟೆಗಳಲ್ಲಿ 2,706 ಮಂದಿಗೆ ಕಾಯಿಲೆ ವಾಸಿಯಾಗಿದ್ದು, ಚೇತರಿಸಿಕೊಂಡವರ ಒಟ್ಟು ಸಂಖ್ಯೆ 28.24 ಲಕ್ಷಕ್ಕೆ ಹೆಚ್ಚಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿದಿದೆ. ಸದ್ಯ 26,256 ಮಂದಿ ಆಸ್ಪತ್ರೆ ಸೇರಿ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಜಿಲ್ಲೆಗಳಲ್ಲೂ ಮೃತರ ಸಂಖ್ಯೆ ಇಳಿದಿದೆ. ಬೆಂಗಳೂರಿನಲ್ಲಿ 5 ಜನ ಅಸುನೀಗಿದ್ದಾರೆ. ದಕ್ಷಿಣ ಕನ್ನಡ, ಹಾಸನ ಮತ್ತು ಮೈಸೂರಿನಲ್ಲಿ ತಲಾ 3, ಹಾವೇರಿ, ಕೋಲಾರ, ಮಂಡ್ಯ ಹಾಗೂ ತುಮಕೂರಿನಲ್ಲಿ ತಲಾ 2 ಮರಣ ಪ್ರಕರಣಗಳು ವರದಿಯಾಗಿವೆ.</p>.<p>ಬೆಂಗಳೂರಿನಲ್ಲಿ ಹೊಸದಾಗಿ 352 ಜನರಿಗೆ ಸೋಂಕು ತಗುಲಿದೆ. ದಕ್ಷಿಣ ಕನ್ನಡ, ಹಾಸನ ಹಾಗೂ ಮೈಸೂರಿನಲ್ಲಿ ಕ್ರಮವಾಗಿ 200, 108 ಮತ್ತು 117 ಮಂದಿ ಸೋಂಕಿತರಾಗಿದ್ದಾರೆ. 14 ಜಿಲ್ಲೆಗಳಲ್ಲಿ ಈ ಸಂಖ್ಯೆ ಎರಡಂಕಿಯಷ್ಟಿದೆ. ರಾಜ್ಯದಲ್ಲಿ ಈವರೆಗೆ 28.86 ಲಕ್ಷ ಜನ ಸೋಂಕಿಗೊಳಪಟ್ಟಂತಾಗಿದೆ.</p>.<p>ಕೋವಿಡ್ ಪರೀಕ್ಷೆಗಳನ್ನು ಮತ್ತಷ್ಟು ಇಳಿಸಲಾಗಿದೆ. ಒಂದು ದಿನದಲ್ಲಿ 1.13 ಲಕ್ಷ ಮಂದಿಯ ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>