ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 4,517 ಹೊಸ ಪ್ರಕರಣ, 120 ಸಾವು

Last Updated 20 ಜೂನ್ 2021, 16:26 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 4,517 ಮಂದಿ ಕೋವಿಡ್ ಪೀಡಿತರಾಗಿರುವುದು ಭಾನುವಾರ ದೃಢಪಟ್ಟಿದೆ. ಸೋಂಕು ದೃಢ ಪ್ರಮಾಣವು ಶೇ 2.58 ಕ್ಕೆ ಇಳಿಕೆಯಾಗಿದೆ.

ಇದು 86 ದಿನಗಳಲ್ಲಿ ವರದಿಯಾದ ಕನಿಷ್ಠ ದೃಢ ಪ್ರಮಾಣ ಹಾಗೂ 79 ದಿನಗಳ ಅವಧಿಯಲ್ಲಿ ವರದಿಯಾದ ಕನಿಷ್ಠ ಪ್ರಕರಣಗಳಾಗಿವೆ. ಕಳೆದ ಮಾ. 27ರಂದು ಶೇ 2.68ರಷ್ಟು ಸೋಂಕು ದೃಢ ಪ್ರಮಾಣ ಹಾಗೂ ಏ.2 ರಂದು 4,991 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು.ಬಳಿಕ ದೃಢ ಪ್ರಮಾಣ ಹಾಗೂ ಹೊಸ ಪ್ರಕರಣಗಳು ಏರುಗತಿ ಪಡೆದುಕೊಂಡಿತ್ತು.

ರಾಜ್ಯದ 27 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 500 ರ ಗಡಿಯೊಳಗೆ ವರದಿಯಾಗಿವೆ. ಬೆಂಗಳೂರಿನಲ್ಲಿ 933 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಮೈಸೂರಿನಲ್ಲಿ 545 ಹಾಗೂ ದಕ್ಷಿಣ ಕನ್ನಡದಲ್ಲಿ 525 ಮಂದಿ ಸೋಂಕಿತರಾಗಿದ್ದಾರೆ. ಈ ಸಂಖ್ಯೆ 13 ಜಿಲ್ಲೆಗಳಲ್ಲಿ ಎರಡಂಕಿಯಲ್ಲಿದೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 28.06 ಲಕ್ಷ ದಾಟಿದೆ.

ಕೊರೊನಾ ಸೋಂಕಿತರಲ್ಲಿ 120 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಮರಣ ಪ್ರಮಾಣ ದರವು ಶೇ 2.65ರಷ್ಟು ವರದಿಯಾಗಿದೆ. ರಾಜ್ಯದ 26 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ 17 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಬೆಂಗಳೂರು ಹಾಗೂ ಬಳ್ಳಾರಿಯಲ್ಲಿ ತಲಾ 12 ಮಂದಿ, ದಕ್ಷಿಣ ಕನ್ನಡ ಹಾಗೂ ಧಾರವಾಡದಲ್ಲಿ ತಲಾ 11 ಮಂದಿ ಸಾವಿಗೀಡಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ 10 ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ಮರಣ ಪ್ರಕರಣಗಳು ವರದಿಯಾಗಿವೆ. ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 33,883ಕ್ಕೆ ತಲುಪಿದೆ.

ಒಂದು ದಿನದ ಅವಧಿಯಲ್ಲಿ 1.74 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1.26 ಲಕ್ಷಕ್ಕೆ ಇಳಿಕೆಯಾಗಿದೆ. ಸೋಂಕಿತರಲ್ಲಿ 8,456 ಮಂದಿಗೆ ಕಾಯಿಲೆ ವಾಸಿಯಾಗಿದೆ. ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 26.45 ಲಕ್ಷ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT