ಬುಧವಾರ, ಮಾರ್ಚ್ 29, 2023
32 °C

Covid-19 Karnataka Update: ರಾಜ್ಯದಲ್ಲಿ 261 ಪ್ರಕರಣ, 5 ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆ ಅವಧಿಯಲ್ಲಿ 261 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಇದರೊಂದಿಗೆ ಈವರೆಗೆ ಸೋಂಕಿತರಾದವರ ಸಂಖ್ಯೆ 29,89,275ಕ್ಕೆ ಏರಿಕೆಯಾಗಿದೆ. 38,095 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ. 29,42,884 ಮಂದಿ ಸೋಂಕಿತರು ಈವರೆಗೆ ಗುಣಮುಖರಾಗಿರುವುದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ.

ಸದ್ಯ ರಾಜ್ಯದಲ್ಲಿ 8,267 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಕೋವಿಡ್ ದೃಢ ಪ್ರಮಾಣ ಶೇ 0.48ರಷ್ಟಿದೆ.

ಬೆಂಗಳೂರಿನಲ್ಲಿ 157, ತುಮಕೂರು 15, ಮೈಸೂರಿನಲ್ಲಿ 13, ದಕ್ಷಿಣ ಕನ್ನಡದಲ್ಲಿ 16 ಪ್ರಕರಣಗಳು ವರದಿಯಾಗಿವೆ.

ಮೈಸೂರಲ್ಲಿ ಇಬ್ಬರು ಸೇರಿದಂತೆ ಬೆಂಗಳೂರು, ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. 26 ಜಿಲ್ಲೆಗಳಲ್ಲಿ ಕೋವಿಡ್‌ ದೃಢ ಪ್ರಕರಣಗಳನ್ನು 10ನ್ನು ದಾಟಿಲ್ಲ. 

ಕೋವಿಡ್‌ ಪರೀಕ್ಷೆಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಬುಧವಾರ 76.420 ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು