ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 25 ಸಾವಿರ ಸಕ್ರಿಯ ಪ್ರಕರಣ

Last Updated 27 ನವೆಂಬರ್ 2020, 18:15 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಪೀಡಿತ ಗುಣಮುಖರ ಸಂಖ್ಯೆ ವಾರದಿಂದೀಚೆಗೆ ಇಳಿಮುಖವಾಗಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆ ಕಂಡಿದ್ದು, ಸದ್ಯ 25,379 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ರಾಜ್ಯದಲ್ಲಿ ಶುಕ್ರವಾರ 1,526 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿಗೀಡಾದವರ ಒಟ್ಟು ಸಂಖ್ಯೆ 8.81 ಲಕ್ಷಕ್ಕೆ ಏರಿಕೆಯಾಗಿದೆ. ಈ ತಿಂಗಳು 27 ದಿನಗಳ ಅವಧಿಯಲ್ಲಿ 57,674 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 2,136 ಮಂದಿ ಸೋಂಕಿತರಾಗಿದ್ದಾರೆ. ಕೋವಿಡ್ ಪೀಡಿತರಲ್ಲಿ ಮತ್ತೆ 12 ಮಂದಿ ಮೃತಪಟ್ಟಿದ್ದು, ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 11,738ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ 808 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.67 ಲಕ್ಷ ದಾಟಿದೆ. ಮೈಸೂರಿನಲ್ಲಿ ಹೊಸದಾಗಿ 75 ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿ ಒಟ್ಟು ಸೋಂಕಿತರ ಸಂಖ್ಯೆ 50,523ಕ್ಕೆ ತಲುಪಿದೆ. ದಕ್ಷಿಣ ಕನ್ನಡ (66), ತುಮಕೂರು (63), ಹಾವೇರಿ (50) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT