ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Updates: ಹೊಸದಾಗಿ 40,499 ಪ್ರಕರಣ ದೃಢ, 21 ಮಂದಿ ಸಾವು

Last Updated 19 ಜನವರಿ 2022, 17:12 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಬುಧವಾರ 40,499 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಸೋಂಕಿತರಪೈಕಿ ಹೊಸದಾಗಿ 23,209 ಮಂದಿ ಚೇತರಿಸಿಕೊಂಡಿದ್ದಾರೆ.

ಒಂದು ದಿನದ ಅವಧಿಯಲ್ಲಿ 2.15 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 18.80 ರಷ್ಟಿದೆ. ನಾಲ್ಕು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ನಾಲ್ಕು ಅಂಕಿಗೆ, 22 ಜಿಲ್ಲೆಗಳಲ್ಲಿ ಮೂರಂಕಿಗೆ ತಲುಪಿದೆ.ಬೆಂಗಳೂರಿನಲ್ಲಿ 24,135 ಪ್ರಕರಣಗಳು ದೃಢಪಟ್ಟರೆ, ಉಳಿದ ಜಿಲ್ಲೆಗಳಿಂದ 16,364 ಪ್ರಕರಣಗಳು ಪತ್ತೆಯಾಗಿವೆ.

ಈ ತಿಂಗಳು 19 ದಿನಗಳಲ್ಲಿ 3.20 ಲಕ್ಷ ಮಂದಿಗೆ ಕೊರೊನಾ ಸೋಂಕು ತಗುಲಿದೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 33.29 ಲಕ್ಷಕ್ಕೆ ಏರಿಕೆಯಾಗಿದೆ.

ತುಮಕೂರಿನಲ್ಲಿ 1,804, ಹಾಸನದಲ್ಲಿ 1,785, ಮೈಸೂರಿನಲ್ಲಿ 1,341 ಹಾಗೂ ಮಂಡ್ಯದಲ್ಲಿ 1,340 ಮಂದಿ ಹೊಸದಾಗಿ ಸೋಂಕಿತರಾಗಿದ್ದಾರೆ.ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಸಾವಿರಕ್ಕಿಂತ ಕಡಿಮೆ ಇವೆ.

ಸೋಂಕಿತರಲ್ಲಿ ಬುಧವಾರ ಚೇತರಿಸಿಕೊಂಡವರಲ್ಲಿ 18,081 ಮಂದಿ ಬೆಂಗಳೂರಿನವರೇ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 30.23 ಲಕ್ಷಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, 2.67 ಲಕ್ಷ ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ 1.84 ಲಕ್ಷ ಸಕ್ರಿಯ ಪ್ರಕರಣಗಳಿವೆ.

ಕೋವಿಡ್ ಪೀಡಿತರಲ್ಲಿ 21 ಮಂದಿ ಮೃತಪಟ್ಟಿದ್ದಾರೆ.ಬೆಂಗಳೂರಿನಲ್ಲಿ ಐದು ಮಂದಿ, ಮೈಸೂರಿನಲ್ಲಿ ನಾಲ್ವರು, ದಕ್ಷಿಣ ಕನ್ನಡದಲ್ಲಿ ಮೂರು ಮಂದಿ, ಬಾಗಲಕೋಟೆ, ಬೆಳಗಾವಿ, ಚಿಕ್ಕಬಳ್ಳಾಪುರ, ಗದಗ, ಹಾಸನ, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯಪುರದಲ್ಲಿತಲಾ ಒಬ್ಬರು ಸಾವಿಗೀಡಾಗಿದ್ದಾರೆ.ರಾಜ್ಯದಲ್ಲಿ ಮರಣ ಪ್ರಮಾಣ ದರವು ಶೇ 0.05 ರಷ್ಟು ವರದಿಯಾಗಿದೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,486ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT