ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19: ಶಾಸಕ ರಂಗನಾಥ್ ಅವರಿಂದ ಪ್ಲಾಸ್ಮಾ ದಾನ ನಾಳೆ

Last Updated 18 ಆಗಸ್ಟ್ 2020, 8:13 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿರುವ ಕುಣಿಗಲ್ ಶಾಸಕ ಡಾ. ರಂಗನಾಥ್‌ ಅವರು ತಮ್ಮ ದೇಹದ ಪ್ಲಾಸ್ಮಾವನ್ನು ಇಬ್ಬರು ಕೊರೊನಾ ರೋಗಿಗಳಿಗೆ ದಾನ ಮಾಡಲು ನಿರ್ಧರಿಸಿದ್ದಾರೆ.

ಇದೇ 19 ರಂದು ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನ ಕಾರ್ಪೊರೇಷನ್ ಕೇಂದ್ರ ಕಚೇರಿ ಹಿಂಭಾಗದಲ್ಲಿರುವ ಎಚ್.ಸಿ.ಜಿ. ಕ್ಯಾನ್ಸರ್ ಆಸ್ಪತ್ರೆಯಲ್ಲಿ ಅವರು ಪ್ಲಾಸ್ಮಾ ದಾನ ಮಾಡಲಿದ್ದಾರೆ.

ಕೊರೊನಾ ಸೋಂಕಿನಿಂದ ಗುಣಮುಖರಾದವರ ದೇಹದ ಪ್ಲಾಸ್ಮಾವನ್ನು ಇಬ್ಬರು ಕೊರೊನಾ ರೋಗಿಗಳಿಗೆ ನೀಡಬಹುದಾಗಿದೆ. ಇದರಿಂದ ಅವರ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.

ಈ ಮೊದಲು ರಂಗನಾಥ್ ಅವರು ಕುಣಿಗಲ್ ಕ್ಷೇತ್ರದ ಜನರಿಗೆ ಕೊರೊನಾ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ವಿಟಮಿನ್ ಸಿ, ಡಿ ಮತ್ತು ಝಿಂಕ್ ಮಾತ್ರೆಗಳನ್ನು ಉಚಿತವಾಗಿ ಹಂಚಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT