‘ಬಿಜೆಪಿಯಿಂದ ರಾಮದ್ರೋಹ’ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಶ್ರೀರಾಮನ ದೇವಸ್ಥಾನ ಕಟ್ಟಬೇಕು ಅಂತ ನಿರ್ಧಾರ ಕೈಗೊಂಡವರೇ ಬಿಜೆಪಿಯವರು. ಪ್ರಣಾಳಿಕೆಯಲ್ಲಿ ಮಂದಿರ ಕಟ್ಟುತ್ತೇವೆ ಎಂದು ಹೇಳಿದ್ದೆವು. ಅದರಂತೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಜನರು ದೇಣಿಗೆ ನೀಡಿದ ಹಣವನ್ನು ದುರುಪಯೋಗ ಮಾಡಿಕೊಳ್ಳುವಂಥ ಅವಶ್ಯಕತೆ ಬಿಜೆಪಿಗಿಲ್ಲ’ ಎಂದರು.