‘ತಿರುಪತಿಯಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚುತ್ತಿವೆ. ಟೋಕನ್ಗಳಿಗಾಗಿ ಸಾವಿರಾರು ಭಕ್ತಾದಿಗಳು ಭೂದೇವಿ ಕಾಂಪ್ಲೆಕ್ಸ್ ಮತ್ತು ವಿಷ್ಣು ನಿವಾಸದಲ್ಲಿ ಕಾಯಬೇಕಾಗುವುದರಿಂದ ವೈರಸ್ ಹಬ್ಬುವ ಸಾಧ್ಯತೆಗಳು ಹೆಚ್ಚು. ಹೀಗಾಗಿ, ಭಕ್ತಾದಿಗಳ ಸುರಕ್ಷತೆಯ ದೃಷ್ಟಿಯಿಂದ ಟೋಕನ್ ವಿತರಣೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗುವುದು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.