<p><strong>ಕಲಬುರ್ಗಿ:</strong> ಕಳೆದ ವರ್ಷದ ಮಾರ್ಚ್ನಿಂದ ಪ್ರಸ್ತುತ ಮೇ 16ರವರೆಗೆಕಲ್ಯಾಣ ಕರ್ನಾಟಕದಲ್ಲಿ156 ಸರ್ಕಾರಿ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಕೋವಿಡ್ನಿಂದ ಸಾವಿಗೀಡಾಗಿದ್ದಾರೆ. ಅತಿ ಹೆಚ್ಚಿನ ಸಾವುಗಳು ಬೀದರ್ ಜಿಲ್ಲೆಯಲ್ಲಿ ಸಂಭವಿಸಿವೆ.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ ಈ ವಿವರವನ್ನು ಸಂಗ್ರಹಿಸಿದೆ. ಹುದ್ದೆ, ಇಲಾಖೆಗೆ ಸೇರ್ಪಡೆಯಾದ ವರ್ಷ, ಕೋವಿಡ್ ಕರ್ತವ್ಯ ಹಾಗೂ ಚುನಾವಣಾ ಕರ್ತವ್ಯದಲ್ಲಿದ್ದಾಗ ಸಾವು ಸಂಭವಿಸಿದೆಯೇ ಎಂಬ ಮಾಹಿತಿಯನ್ನು ಸಂಗ್ರಹಿಸಿ ಅದನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಅವರಿಗೆ ಸಲ್ಲಿಸಿದೆ.</p>.<p>156 ಶಿಕ್ಷಕರ ಪೈಕಿ ಕೋವಿಡ್ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಆರು ಜನ ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 9 ಶಿಕ್ಷಕರು ಸೇರಿ 15 ಶಿಕ್ಷಕರು ಮೃತಪಟ್ಟಿದ್ದಾರೆ. ಈ ಶಿಕ್ಷಕರಿಗೆ ಕೋವಿಡ್ ವಾರಿಯರ್ಗಳಿಗೆ ನೀಡಲಾಗುವ ಪರಿಹಾರ ದೊರೆಯಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.</p>.<p>ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಮೃತಪಟ್ಟವ ಶಿಕ್ಷಕರ ಸಂಖ್ಯೆ ಹೆಚ್ಚಾಗಿಲ್ಲ. ಆದರೆ, ಏಪ್ರಿಲ್ನಿಂದ ಆರಂಭವಾದ ಎರಡನೇ ಅಲೆಯಲ್ಲಿ ಹೆಚ್ಚು ಜನ ಸಾವಿಗೀಡಾಗಿದ್ದಾರೆ.</p>.<p>‘ಇಲಾಖೆ ಸೂಚಿಸಿದಂತೆ ವಿದ್ಯಾರ್ಥಿಗಳಿಲ್ಲದಿದ್ದರೂ ಶಾಲೆಗಳಿಗೆ ಭೇಟಿ ನೀಡಿ ಕರ್ತವ್ಯ ನಿರ್ವಹಿಸಿದ್ದಾರೆ. ವಿದ್ಯಾಗಮ ಯೋಜನೆಯಡಿ ಪಾಠ ಹೇಳಿದವರಿಗೂ ಕೋವಿಡ್ ತಗುಲಿದೆ. ಸರ್ಕಾರದ ಮಾನದಂಡಗಳ ಪ್ರಕಾರ ಇವರಿಗೆ ಕೋವಿಡ್ ಸಂಬಂಧಿ ಕೆಲಸದಲ್ಲಿ ತೊಡಗಿದ್ದಾರೆ ಎಂದು ಪರಿಗಣಿಸುವುದಿಲ್ಲ. ಈ ನಿಯಮವನ್ನು ಸಡಿಲಿಸಿ ಕೋವಿಡ್ನಿಂದ ಮೃತಪಟ್ಟ ಎಲ್ಲ ಶಿಕ್ಷಕರಿಗೂ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸಚಿವ ಸುರೇಶಕುಮಾರ್ ಅವರಿಗೆ ಮನವಿ ಸಲ್ಲಿಸಿದೆ.</p>.<p>ಕೋವಿಡ್ನಿಂದ ಸಾವಿಗೀಡಾದ ಎಲ್ಲಶಿಕ್ಷಕರನ್ನು ಕೊರೊನಾ ವಾರಿಯರ್ಗಳೆಂದು ಪರಿಗಣಿಸಿ ₹ 1 ಕೋಟಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಕೋವಿಡ್ ರೋಗಿಗಳ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಭರಿಸಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಒತ್ತಾಯಿಸಿದ್ದಾರೆ.</p>.<p>****</p>.<p>ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ 15 ಜನ ಶಿಕ್ಷಕರು ಮೃತಪಟ್ಟಿದ್ದು, ಪರಿಹಾರ ನೀಡುವ ಸಂಬಂಧ ಸರ್ಕಾರಕ್ಕೆ ಮಾಹಿತಿ ಕಳಿಸಿದ್ದೇವೆ.</p>.<p><em><strong>- ಡಾ. ಬಿಕೆಎಸ್ ವರ್ಧನ್, ನಿರ್ದೇಶಕ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಲಬುರ್ಗಿ ವಿಭಾಗ</strong></em></p>.<p>ಶಿಕ್ಷಣ ಇಲಾಖೆ ವ್ಯಾಪ್ತಿಯ ಜಿಲ್ಲೆಗಳಲ್ಲಿ ಕೋವಿಡ್ ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ 15 ಜನ ಶಿಕ್ಷಕರು ಮೃತಪಟ್ಟಿದ್ದು, ನಿಯಮಾನುಸಾರ ಪರಿಹಾರ ನೀಡುವ ಸಂಬಂಧ ಸರ್ಕಾರಕ್ಕೆ ಮಾಹಿತಿ ಕಳಿಸಿದ್ದೇವೆ.</p>.<p><em><strong>- ಡಾ.ಬಿಕೆಎಸ್ ವರ್ಧನ್, ನಿರ್ದೇಶಕ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಲಬುರ್ಗಿ ವಿಭಾಗ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಕಳೆದ ವರ್ಷದ ಮಾರ್ಚ್ನಿಂದ ಪ್ರಸ್ತುತ ಮೇ 16ರವರೆಗೆಕಲ್ಯಾಣ ಕರ್ನಾಟಕದಲ್ಲಿ156 ಸರ್ಕಾರಿ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಕೋವಿಡ್ನಿಂದ ಸಾವಿಗೀಡಾಗಿದ್ದಾರೆ. ಅತಿ ಹೆಚ್ಚಿನ ಸಾವುಗಳು ಬೀದರ್ ಜಿಲ್ಲೆಯಲ್ಲಿ ಸಂಭವಿಸಿವೆ.</p>.<p>ಸಾರ್ವಜನಿಕ ಶಿಕ್ಷಣ ಇಲಾಖೆ ಈ ವಿವರವನ್ನು ಸಂಗ್ರಹಿಸಿದೆ. ಹುದ್ದೆ, ಇಲಾಖೆಗೆ ಸೇರ್ಪಡೆಯಾದ ವರ್ಷ, ಕೋವಿಡ್ ಕರ್ತವ್ಯ ಹಾಗೂ ಚುನಾವಣಾ ಕರ್ತವ್ಯದಲ್ಲಿದ್ದಾಗ ಸಾವು ಸಂಭವಿಸಿದೆಯೇ ಎಂಬ ಮಾಹಿತಿಯನ್ನು ಸಂಗ್ರಹಿಸಿ ಅದನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಅವರಿಗೆ ಸಲ್ಲಿಸಿದೆ.</p>.<p>156 ಶಿಕ್ಷಕರ ಪೈಕಿ ಕೋವಿಡ್ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಆರು ಜನ ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 9 ಶಿಕ್ಷಕರು ಸೇರಿ 15 ಶಿಕ್ಷಕರು ಮೃತಪಟ್ಟಿದ್ದಾರೆ. ಈ ಶಿಕ್ಷಕರಿಗೆ ಕೋವಿಡ್ ವಾರಿಯರ್ಗಳಿಗೆ ನೀಡಲಾಗುವ ಪರಿಹಾರ ದೊರೆಯಲಿದೆ ಎಂದು ಶಿಕ್ಷಣ ಇಲಾಖೆ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.</p>.<p>ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ಮೃತಪಟ್ಟವ ಶಿಕ್ಷಕರ ಸಂಖ್ಯೆ ಹೆಚ್ಚಾಗಿಲ್ಲ. ಆದರೆ, ಏಪ್ರಿಲ್ನಿಂದ ಆರಂಭವಾದ ಎರಡನೇ ಅಲೆಯಲ್ಲಿ ಹೆಚ್ಚು ಜನ ಸಾವಿಗೀಡಾಗಿದ್ದಾರೆ.</p>.<p>‘ಇಲಾಖೆ ಸೂಚಿಸಿದಂತೆ ವಿದ್ಯಾರ್ಥಿಗಳಿಲ್ಲದಿದ್ದರೂ ಶಾಲೆಗಳಿಗೆ ಭೇಟಿ ನೀಡಿ ಕರ್ತವ್ಯ ನಿರ್ವಹಿಸಿದ್ದಾರೆ. ವಿದ್ಯಾಗಮ ಯೋಜನೆಯಡಿ ಪಾಠ ಹೇಳಿದವರಿಗೂ ಕೋವಿಡ್ ತಗುಲಿದೆ. ಸರ್ಕಾರದ ಮಾನದಂಡಗಳ ಪ್ರಕಾರ ಇವರಿಗೆ ಕೋವಿಡ್ ಸಂಬಂಧಿ ಕೆಲಸದಲ್ಲಿ ತೊಡಗಿದ್ದಾರೆ ಎಂದು ಪರಿಗಣಿಸುವುದಿಲ್ಲ. ಈ ನಿಯಮವನ್ನು ಸಡಿಲಿಸಿ ಕೋವಿಡ್ನಿಂದ ಮೃತಪಟ್ಟ ಎಲ್ಲ ಶಿಕ್ಷಕರಿಗೂ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸಚಿವ ಸುರೇಶಕುಮಾರ್ ಅವರಿಗೆ ಮನವಿ ಸಲ್ಲಿಸಿದೆ.</p>.<p>ಕೋವಿಡ್ನಿಂದ ಸಾವಿಗೀಡಾದ ಎಲ್ಲಶಿಕ್ಷಕರನ್ನು ಕೊರೊನಾ ವಾರಿಯರ್ಗಳೆಂದು ಪರಿಗಣಿಸಿ ₹ 1 ಕೋಟಿ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಕೋವಿಡ್ ರೋಗಿಗಳ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಭರಿಸಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಒತ್ತಾಯಿಸಿದ್ದಾರೆ.</p>.<p>****</p>.<p>ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ 15 ಜನ ಶಿಕ್ಷಕರು ಮೃತಪಟ್ಟಿದ್ದು, ಪರಿಹಾರ ನೀಡುವ ಸಂಬಂಧ ಸರ್ಕಾರಕ್ಕೆ ಮಾಹಿತಿ ಕಳಿಸಿದ್ದೇವೆ.</p>.<p><em><strong>- ಡಾ. ಬಿಕೆಎಸ್ ವರ್ಧನ್, ನಿರ್ದೇಶಕ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಲಬುರ್ಗಿ ವಿಭಾಗ</strong></em></p>.<p>ಶಿಕ್ಷಣ ಇಲಾಖೆ ವ್ಯಾಪ್ತಿಯ ಜಿಲ್ಲೆಗಳಲ್ಲಿ ಕೋವಿಡ್ ಹಾಗೂ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ 15 ಜನ ಶಿಕ್ಷಕರು ಮೃತಪಟ್ಟಿದ್ದು, ನಿಯಮಾನುಸಾರ ಪರಿಹಾರ ನೀಡುವ ಸಂಬಂಧ ಸರ್ಕಾರಕ್ಕೆ ಮಾಹಿತಿ ಕಳಿಸಿದ್ದೇವೆ.</p>.<p><em><strong>- ಡಾ.ಬಿಕೆಎಸ್ ವರ್ಧನ್, ನಿರ್ದೇಶಕ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಲಬುರ್ಗಿ ವಿಭಾಗ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>