ಬೆಂಗಳೂರಿನಲ್ಲಿ 151 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ಖಾತರಿಯಾಗಿದೆ. ದಕ್ಷಿಣ ಕನ್ನಡ (12), ಮೈಸೂರು (19), ತುಮಕೂರು (11), ಉಡುಪಿ (11), ಉತ್ತರ ಕನ್ನಡದಲ್ಲಿ (12) ಎರಡಂಕಿಯಷ್ಟು ಪ್ರಕರಣಗಳು ವರದಿಯಾಗಿವೆ. ಬಾಗಲಕೋಟೆ, ಬಳ್ಳಾರಿ, ಬೀದರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಗದಗ, ಹಾವೇರಿ, ಕಲಬುರಗಿ, ಕೋಲಾರ, ಕೊಪ್ಪಳ, ವಿಜಯಪುರ, ಯಾದಗಿರಿಯಲ್ಲಿ ಹೊಸ ಪ್ರಕರಣಗಳು ದಾಖಲಾಗಿಲ್ಲ. ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಹಾಸನ, ಕೊಡಗು, ಮಂಡ್ಯ, ರಾಯಚೂರು, ರಾಮನಗರ, ಶಿವಮೊಗ್ಗದಲ್ಲಿ ಒಂದಂಕಿಗೆ ಇಳಿದಿದೆ.ಬುಧವಾರ 76,420 ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ.