ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು ಸರ್ಕಾರದ ಎಲ್ಲ ಇಲಾಖೆಗಳ ನೌಕರರು ಕೋವಿಡ್ ನಿಯಂತ್ರಣ ಕರ್ತವ್ಯದಲ್ಲಿ ಭಾಗಿಯಾಗಿ ಮೃತರಾದರೆ ಅವರ ಕುಟುಂಬಗಳಿಗೆ ತಲಾ ₹ 30 ಲಕ್ಷ ಪರಿಹಾರ ವಿತರಿಸುವ ಸಂಬಂಧ 2020ರ ಆಗಸ್ಟ್ 7ರಂದು ಆದೇಶ ಹೊರಡಿಸಲಾಗಿತ್ತು. ಈ ಸೌಲಭ್ಯವನ್ನು ಅನುದಾನಿತ ಶಾಲಾ ಶಿಕ್ಷಕರಿಗೂ ವಿಸ್ತರಿಸಿ ಗುರುವಾರ ಆದೇಶ ಹೊರಡಿಸಲಾಗಿದೆ.