ಮುಖ್ಯಮಂತ್ರಿಯವರಿಗೂ ಕೋವಿಡ್ ತಗುಲಿರುವುದರಿಂದ ಅವರು ಪ್ರತ್ಯೇಕ ವಾಸದಲ್ಲಿದ್ದಾರೆ. ಈ ಕಾರಣದಿಂದ ವರ್ಚ್ಯುಯಲ್ ಆಗಿ ಸಭೆ ನಡೆಯಲಿದೆ. ಕಂದಾಯ ಸಚಿವ ಆರ್. ಅಶೋಕ, ಗೃಹ ಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸೇರಿದಂತೆ ಕೆಲವು ಸಚಿವರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳುವರು.