ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಆರೋಗ್ಯ ವ್ಯವಸ್ಥೆ, ಸರ್ಕಾರದ ಮೇಲೆ ತಡೆಯಲಾರದ ಒತ್ತಡ ಸೃಷ್ಟಿಯಾಗುತ್ತಿದೆ. ಈ ಕಾರಣಕ್ಕೆ ತಜ್ಞರು, ವೈದ್ಯರು, ಸಲಹೆಗಾರರ ಜೊತೆ ಚರ್ಚಿದ ಜೆಡಿಎಸ್ ಶಾಸಕಾಂಗಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರಕ್ಕೆ ಹತ್ತು ಸಲಹೆಗಳನ್ನು ನೀಡಿದ್ದಾರೆ.