ಈ ವಿಚಾರವಾಗಿ ಸೋಮವಾರ ಬೆಳಿಗ್ಗೆ ಟ್ವೀಟ್ ಮಾಡಿರುವ ಅವರು, 'ಚುನಾವಣೆ ಕರ್ತವ್ಯದಲ್ಲಿ ದುಡಿದ ಮತ್ತು ವಿದ್ಯಾಗಮ ಯೋಜನೆ ಮೂಲಕ ಪಾಠ ಮಾಡಿದ ಕಲ್ಯಾಣ ಕರ್ನಾಟಕದ 145 ಶಿಕ್ಷಕರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಉಳಿದ ಕಡೆ ಮೃತಪಟ್ಟವರ ಲೆಕ್ಕ ಸಿಗುತ್ತಿಲ್ಲ. ಮೃತಪಟ್ಟ ಎಲ್ಲ ಶಿಕ್ಷಕರನ್ನು ಕೊರೋನಾ ವಾರಿಯರ್ಸ್ ಎಂದು ಪರಿಗಣಿಸಿ ಕನಿಷ್ಠ ₹50 ಲಕ್ಷ ಪರಿಹಾರ ನೀಡುವಂತೆ ನಾನು ಆಗ್ರಹಿಸುತ್ತೇನೆ' ಎಂದಿದ್ದಾರೆ.