ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿ ಹೇಳುವ ಪ್ರಯತ್ನ ಪ್ರಯೋಜನವಾಗಿಲ್ಲ. ಪಾಲಿಕೆ ಆಯುಕ್ತ ಸುರೇಶ ಇಟ್ನಾಳ್ ‘ಲಸಿಕೆಯಿಂದ ಅಡ್ಡ ಪರಿಣಾಮ ಅಥವಾ ದುಷ್ಪರಿಣಾಮ ಉಂಟಾದರೆ ನಾವು ಜವಾಬ್ದಾರಿ ವಹಿಸಿಕೊಳ್ಳುತ್ತೇವೆ’ ಎಂದು ಮುಚ್ಚಳಿಕೆ ಬರೆದು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಹಣಾ ಅಧಿಕಾರಿ, ಉಪ ವಿಭಾಗಾಧಿಕಾರಿ ಸಹಿ ಜೊತೆ ತಮ್ಮ ಸಹಿ ಹಾಕಿ ನೀಡಿದರು. ಅಲ್ಲದೆ, ಅಲ್ಲಿಯೇ ಆನಂದ ಅವರಿಗೆ ಕೋವ್ಯಾಕ್ಸಿನ್ ಲಸಿಕೆ ಹಾಕಿದರು.