ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ 1,606 ಹೊಸ ಪ್ರಕರಣಗಳು ವರದಿಯಾಗಿದ್ದು, 31 ಸೋಂಕಿತರು ಮೃತಪಟ್ಟಿದ್ದಾರೆ.
ಈ ವರೆಗೂ ರಾಜ್ಯದಲ್ಲಿ ಒಟ್ಟು 28,96,163 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 28,36,678 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಒಂದೇ ದಿನ 1,937 ಮಂದಿ ಕೋವಿಡ್ನಿಂದ ಚೇತರಿಸಿಕೊಂಡಿದ್ದಾರೆ. ಈಗಿರುವ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 23,057 ಆಗಿದೆ.
ಇಲ್ಲಿವರೆಗೂ ಕೋವಿಡ್ನಿಂದ ಒಟ್ಟು 36,405 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರು ನಗರ(467), ದಕ್ಷಿಣ ಕನ್ನಡ(357), ಮೈಸೂರು(162), ಉಡುಪಿ(78), ತುಮಕೂರು(59), ಬೆಳಗಾವಿ(69) ಹೊಸ ಪ್ರಕರಣಗಳು ವರದಿಯಾಗಿವೆ.
ಕಳೆದ 24 ಗಂಟೆಗಳಲ್ಲಿ ಕೊಪ್ಪಳ, ಕಲಬುರಗಿ, ಬೀದರ್, ಬಳ್ಳಾರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಯಾವುದೇ ಹೊಸ ಪ್ರಕರಣಗಳು ಬೆಳಕಿಗೆ ಬಂದಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.