ಈ ಕುರಿತು ಪ್ರತ್ಯೇಕ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕೋಟೆ ಮತ್ತು ಹಾಲನೂರ್ ಎಸ್. ಲೇಪಾಕ್ಷ್, ‘ಶಾಲೆಗಳನ್ನು ಆರಂಭಿಸುವಂತೆ ನಾವು ಮಾಡಿದ್ದ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮನ್ನು ಮಾತುಕತೆಗೆ ಆಹ್ವಾನಿಸಿದ್ದಾರೆ. ಶಾಲೆಗಳನ್ನು ಯಾವುದೇ ವಿಳಂಬ ಮಾಡದೆ ಆರಂಭಿಸುವಂತೆ ನಾವು ಈಗಾಗಲೇ ಬೇಡಿಕೆ ಇಟ್ಟಿದ್ದೇವೆ’ ಎಂದರು.