ಉಜಿರೆ: ಕೋವಿಡ್ ಹರಡುವುದನ್ನು ತಡೆಯಲು ಸರ್ಕಾರ ಹೊರಡಿಸಿರುವ ಆದೇಶದಂತೆ, ಧರ್ಮಸ್ಥಳ ದೇವಸ್ಥಾನದಲ್ಲಿ ತುಲಾಭಾರ, ಉತ್ಸವಾದಿ ಸೇವೆಗಳಿಗೆ ಆನ್ಲೈನ್ ಮೂಲಕ ಕಾದಿರಿಸುವುದನ್ನು ರದ್ದುಗೊಳಿಸಲಾಗಿದೆ. ವಸತಿ ಛತ್ರದಲ್ಲಿ ಕೋಣೆ ಕಾದಿರಿಸುವುದನ್ನೂ ಸ್ಥಗಿತಗೊಳಿಸಲಾಗಿದೆ.
ವಾರಾಂತ್ಯದ ಕರ್ಫ್ಯೂ ದಿನಗಳಲ್ಲಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ ಕೋವಿಡ್ ಮಾರ್ಗಸೂಚಿ ಅನುಸರಿಸಿ, ದರ್ಶನಕ್ಕೆ ಅವಕಾಶ ನೀಡಲಾಗುವುದು’ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.