ಕಾಂಗ್ರೆಸ್, ಜೆಡಿಎಸ್ ನಾಯಕರು ನೀಡಿದ ಸಲಹೆ, ಕೇಂದ್ರ ಸರ್ಕಾರದ ನಿರ್ದೇಶನ, ತಜ್ಞರು ನೀಡುವ ಶಿಫಾರಸು ಆಧರಿಸಿ ಹೊಸ ಮಾರ್ಗಸೂಚಿ ಹೊರಡಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು. 18ರಿಂದ 20 ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ಇಲ್ಲ. ಹಾಗಿದ್ದರೂ ಜನರ ಜೀವ, ಜೀವನ ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಣಯ ಕೈಗೊಳ್ಳಲಿದೆ ಎಂದರು.