ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಖಾತೆಗಳಿಗೆ ತಲಾ ₹ 3 ಸಾವಿರ ಪರಿಹಾರ ಮೊತ್ತ ಡಿಬಿಟಿ ಮಾಡಲಾಗಿದೆ. ಟೈಲರ್ಗಳು, ಗೃಹ ಕಾರ್ಮಿಕರು, ಹಮಾಲರು, ಮೆಕ್ಯಾನಿಕ್ಗಳು, ಕುಂಬಾರರು, ಅಗಸರು, ಕಮ್ಮಾರರು, ಮಂಡಕ್ಕಿ ಭಟ್ಟಿ ಕಾರ್ಮಿಕರು, ಕ್ಷೌರಿಕರು, ಅಕ್ಕಸಾಲಿಗರು, ಚಿಂದಿ ಆಯುವವರು ಈ 11 ವರ್ಗಗಳ ಫಲಾನುಭವಿಗಳಿಗೆ ತಲಾ ₹ 2 ಸಾವಿರದಂತೆ ನೆರವು ನೀಡಲಾಗುತ್ತಿದೆ. ಈ ಪ್ರಕ್ರಿಯೆಗೆ ಜೂನ್ 5ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದರು.