<p><strong>ಬೆಂಗಳೂರು:</strong> ರಾಜ್ಯದಲ್ಲಿ ವಿಜಯಪುರ, ಉತ್ತರ ಕನ್ನಡ, ರಾಯಚೂರು ಸೇರಿದಂತೆ 11 ಜಿಲ್ಲೆಗಳು ಕೋವಿಡ್ ಮುಕ್ತಗೊಂಡಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,468ಕ್ಕೆ ಇಳಿಕೆ ಕಂಡಿದೆ.</p>.<p>ಕೋವಿಡ್ ಮೂರನೇ ಅಲೆ ಕಾಣಿಸಿಕೊಂಡ ಬಳಿಕ ಎರಡು ಲಕ್ಷದ ಗಡಿ ಸಮೀಪಿಸಿದ್ದ ಕೋವಿಡ್ ಪರೀಕ್ಷೆಗಳ ಸಂಖ್ಯೆ, ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ 12,376ಕ್ಕೆ ಇಳಿಕೆಯಾಗಿದೆ. ಕಳೆದೊಂದು ತಿಂಗಳಿನಿಂದ ಹೊಸ ಪ್ರಕರಣಗಳು ಹಾಗೂ ಪರೀಕ್ಷೆಗಳ ಸಂಖ್ಯೆ ಇಳಿಮುಖವಾಗಿದೆ. ಮಂಗಳವಾರ 29 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ. ಯಾವುದೇ ಮರಣ ಪ್ರಕರಣ ಹೊಸದಾಗಿ ವರದಿಯಾಗಿಲ್ಲ.</p>.<p>ರಾಜ್ಯದಲ್ಲಿ ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 39.45 ಲಕ್ಷ ದಾಟಿದೆ. ಕೋವಿಡ್ ಪೀಡಿತರಲ್ಲಿ 39.04 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. ಚಿಕ್ಕಮಗಳೂರು, ದಾವಣಗೆರೆ, ಗದಗ, ಹಾಸನ, ಹಾವೇರಿ, ಕೊಡಗು, ಕೊಪ್ಪಳ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಸದ್ಯ ಕೋವಿಡ್ ಪ್ರಕರಣಗಳಿಲ್ಲ. ಬಾಗಲಕೋಟೆ, ಯಾದಗಿರಿ ಸೇರಿದಂತೆ 15 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಹತ್ತಕ್ಕಿಂತ ಕಡಿಮೆ ಇದೆ. ಬೆಂಗಳೂರಿನಲ್ಲಿ 1,377 ಸೋಂಕಿತರಿದ್ದಾರೆ.</p>.<p>ಸೋಂಕು ದೃಢ ಪ್ರಮಾಣ ಶೇ 0.23ಕ್ಕೆ ಇಳಿಕೆಯಾಗಿದೆ. ವಾರದ ಸರಾಸರಿ ಶೇ 0.33 ರಷ್ಟಿದೆ. ಕೊರೊನಾ ಸೋಂಕಿತರಲ್ಲಿ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 40,055ಕ್ಕೆ ಏರಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ವಿಜಯಪುರ, ಉತ್ತರ ಕನ್ನಡ, ರಾಯಚೂರು ಸೇರಿದಂತೆ 11 ಜಿಲ್ಲೆಗಳು ಕೋವಿಡ್ ಮುಕ್ತಗೊಂಡಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,468ಕ್ಕೆ ಇಳಿಕೆ ಕಂಡಿದೆ.</p>.<p>ಕೋವಿಡ್ ಮೂರನೇ ಅಲೆ ಕಾಣಿಸಿಕೊಂಡ ಬಳಿಕ ಎರಡು ಲಕ್ಷದ ಗಡಿ ಸಮೀಪಿಸಿದ್ದ ಕೋವಿಡ್ ಪರೀಕ್ಷೆಗಳ ಸಂಖ್ಯೆ, ಸೋಂಕು ನಿಯಂತ್ರಣಕ್ಕೆ ಬಂದಿರುವುದರಿಂದ 12,376ಕ್ಕೆ ಇಳಿಕೆಯಾಗಿದೆ. ಕಳೆದೊಂದು ತಿಂಗಳಿನಿಂದ ಹೊಸ ಪ್ರಕರಣಗಳು ಹಾಗೂ ಪರೀಕ್ಷೆಗಳ ಸಂಖ್ಯೆ ಇಳಿಮುಖವಾಗಿದೆ. ಮಂಗಳವಾರ 29 ಮಂದಿ ಕೊರೊನಾ ಸೋಂಕಿತರಾಗಿದ್ದಾರೆ. ಯಾವುದೇ ಮರಣ ಪ್ರಕರಣ ಹೊಸದಾಗಿ ವರದಿಯಾಗಿಲ್ಲ.</p>.<p>ರಾಜ್ಯದಲ್ಲಿ ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 39.45 ಲಕ್ಷ ದಾಟಿದೆ. ಕೋವಿಡ್ ಪೀಡಿತರಲ್ಲಿ 39.04 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. ಚಿಕ್ಕಮಗಳೂರು, ದಾವಣಗೆರೆ, ಗದಗ, ಹಾಸನ, ಹಾವೇರಿ, ಕೊಡಗು, ಕೊಪ್ಪಳ ಹಾಗೂ ಮಂಡ್ಯ ಜಿಲ್ಲೆಯಲ್ಲಿ ಸದ್ಯ ಕೋವಿಡ್ ಪ್ರಕರಣಗಳಿಲ್ಲ. ಬಾಗಲಕೋಟೆ, ಯಾದಗಿರಿ ಸೇರಿದಂತೆ 15 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಹತ್ತಕ್ಕಿಂತ ಕಡಿಮೆ ಇದೆ. ಬೆಂಗಳೂರಿನಲ್ಲಿ 1,377 ಸೋಂಕಿತರಿದ್ದಾರೆ.</p>.<p>ಸೋಂಕು ದೃಢ ಪ್ರಮಾಣ ಶೇ 0.23ಕ್ಕೆ ಇಳಿಕೆಯಾಗಿದೆ. ವಾರದ ಸರಾಸರಿ ಶೇ 0.33 ರಷ್ಟಿದೆ. ಕೊರೊನಾ ಸೋಂಕಿತರಲ್ಲಿ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 40,055ಕ್ಕೆ ಏರಿಕೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>