<p><strong>ಬೆಂಗಳೂರು: </strong>ಕೋವಿಡ್ ಎರಡನೇ ಅಲೆ ಹರಡುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬೇಕಾಬಿಟ್ಟಿಯಾಗಿ ಮಾರ್ಗಸೂಚಿ ರೂಪಿಸಿ, ಜಾರಿಗೊಳಿಸಬಾರದು. ಮಾರ್ಗಸೂಚಿಗಳು ಎಲ್ಲರಿಗೂ ಅನ್ವಯವಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.</p>.<p>ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ತನಗೆ ಬೇಕಾದಾಗ ಮಾರ್ಗಸೂಚಿಗಳನ್ನು ಜಾರಿಗೆ ತರುವುದು, ಬೇಡ ಆದಾಗ ಸಡಿಲಗೊಳಿಸುವ ಕೆಲಸವನ್ನು ಸರ್ಕಾರ ಮಾಡಬಾರದು. ಕೆಲವರಿಗೆ ಅನುಕೂಲವಾಗುವಂತೆಯೂ ಮಾರ್ಗಸೂಚಿಗಳನ್ನು ರೂಪಿಸಬಾರದು. ಆ ರೀತಿಯ ಪ್ರಯತ್ನ ಮಾಡಿದರೆ ನಾವು ಹೋರಾಟಕ್ಕೆ ಇಳಿಯುತ್ತೇವೆ’ ಎಂದರು.</p>.<p>ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಒಳಿತಿಗಾಗಿ ಕಾನೂನು, ನಿಯಮಗಳನ್ನು ರೂಪಿಸಿ, ಜಾರಿಗೆ ತರಬೇಕು. ಕೆಲವರ ಹಕ್ಕುಗಳನ್ನು ಮೊಟಕುಗೊಳಿಸುವುದು ಮತ್ತು ಕೆಲವರಿಗೆ ಮುಕ್ತ ಅವಕಾಶಗಳನ್ನು ನೀಡುವುದನ್ನು ಕಾಂಗ್ರೆಸ್ ಒಪ್ಪುವುದಿಲ್ಲ ಎಂದು ಹೇಳಿದರು.</p>.<p>ಮುಖ್ಯಮಂತ್ರಿಗೆ ನಿಷ್ಠರಲ್ಲ: ‘ಸಚಿವ ಕೆ.ಎಸ್. ಈಶ್ವರಪ್ಪ ಅವರು ಪಕ್ಷನಿಷ್ಠ ಎಂದು ಹೇಳಿಕೊಂಡಿದ್ದಾರೆ. ಆದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ತಾವು ಮುಖ್ಯಮಂತ್ರಿಗೆ ನಿಷ್ಠರಾಗಿ ಇಲ್ಲ ಎಂಬುದನ್ನು ಈಶ್ವರಪ್ಪ ಸಾಬೀತು ಮಾಡಿದ್ದಾರೆ’ ಎಂದು ಶಿವಕುಮಾರ್ ಟೀಕಿಸಿದರು.</p>.<p>ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಮುಖ್ಯಮಂತ್ರಿಯವರು ಈಶ್ವರಪ್ಪ ಅವರನ್ನು ಏಕೆ ಇನ್ನೂ ಸಂಪುಟದಿಂದ ವಜಾಗೊಳಿಸಿಲ್ಲ. ತಾವೇ ತಪ್ಪು ಮಾಡಿರುವುದಾಗಿ ಮುಖ್ಯಮಂತ್ರಿ ಒಪ್ಪಿಕೊಳ್ಳುತ್ತಿದ್ದಾರೆಯೆ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್ ಎರಡನೇ ಅಲೆ ಹರಡುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬೇಕಾಬಿಟ್ಟಿಯಾಗಿ ಮಾರ್ಗಸೂಚಿ ರೂಪಿಸಿ, ಜಾರಿಗೊಳಿಸಬಾರದು. ಮಾರ್ಗಸೂಚಿಗಳು ಎಲ್ಲರಿಗೂ ಅನ್ವಯವಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.</p>.<p>ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ತನಗೆ ಬೇಕಾದಾಗ ಮಾರ್ಗಸೂಚಿಗಳನ್ನು ಜಾರಿಗೆ ತರುವುದು, ಬೇಡ ಆದಾಗ ಸಡಿಲಗೊಳಿಸುವ ಕೆಲಸವನ್ನು ಸರ್ಕಾರ ಮಾಡಬಾರದು. ಕೆಲವರಿಗೆ ಅನುಕೂಲವಾಗುವಂತೆಯೂ ಮಾರ್ಗಸೂಚಿಗಳನ್ನು ರೂಪಿಸಬಾರದು. ಆ ರೀತಿಯ ಪ್ರಯತ್ನ ಮಾಡಿದರೆ ನಾವು ಹೋರಾಟಕ್ಕೆ ಇಳಿಯುತ್ತೇವೆ’ ಎಂದರು.</p>.<p>ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಒಳಿತಿಗಾಗಿ ಕಾನೂನು, ನಿಯಮಗಳನ್ನು ರೂಪಿಸಿ, ಜಾರಿಗೆ ತರಬೇಕು. ಕೆಲವರ ಹಕ್ಕುಗಳನ್ನು ಮೊಟಕುಗೊಳಿಸುವುದು ಮತ್ತು ಕೆಲವರಿಗೆ ಮುಕ್ತ ಅವಕಾಶಗಳನ್ನು ನೀಡುವುದನ್ನು ಕಾಂಗ್ರೆಸ್ ಒಪ್ಪುವುದಿಲ್ಲ ಎಂದು ಹೇಳಿದರು.</p>.<p>ಮುಖ್ಯಮಂತ್ರಿಗೆ ನಿಷ್ಠರಲ್ಲ: ‘ಸಚಿವ ಕೆ.ಎಸ್. ಈಶ್ವರಪ್ಪ ಅವರು ಪಕ್ಷನಿಷ್ಠ ಎಂದು ಹೇಳಿಕೊಂಡಿದ್ದಾರೆ. ಆದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ತಾವು ಮುಖ್ಯಮಂತ್ರಿಗೆ ನಿಷ್ಠರಾಗಿ ಇಲ್ಲ ಎಂಬುದನ್ನು ಈಶ್ವರಪ್ಪ ಸಾಬೀತು ಮಾಡಿದ್ದಾರೆ’ ಎಂದು ಶಿವಕುಮಾರ್ ಟೀಕಿಸಿದರು.</p>.<p>ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಮುಖ್ಯಮಂತ್ರಿಯವರು ಈಶ್ವರಪ್ಪ ಅವರನ್ನು ಏಕೆ ಇನ್ನೂ ಸಂಪುಟದಿಂದ ವಜಾಗೊಳಿಸಿಲ್ಲ. ತಾವೇ ತಪ್ಪು ಮಾಡಿರುವುದಾಗಿ ಮುಖ್ಯಮಂತ್ರಿ ಒಪ್ಪಿಕೊಳ್ಳುತ್ತಿದ್ದಾರೆಯೆ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>