<p>ಬೆಂಗಳೂರು: ಕರ್ಫ್ಯೂ ಅವಧಿಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸದೇ ಇದ್ದರೆ, ಇನ್ನೂ ಕಠಿಣ ನಿಯಮಗಳನ್ನು ಜಾರಿ ಮಾಡುವುದು ಅನಿವಾರ್ಯ ಎಂದು ಕಂದಾಯ ಸಚಿವ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.</p>.<p>ಕೊರೋನಾ ಸೋಂಕಿನ ಸರಪಳಿ ಮುರಿಯಲು ಸಾರ್ವಜನಿಕರು ಮನೆಯಲ್ಲೇ ಇರಬೇಕು. ಅನಿವಾರ್ಯ ಇದ್ದರಷ್ಟೇ ಹೊರಗೆ ಬರಬೇಕು. 14 ದಿನಗಳಲ್ಲಿ ಸೋಂಕು ಸರಪಳಿ ಮುರಿದರೆ ಮುಂದೆ ಕಠಿಣ ಕ್ರಮಗಳ ಜಾರಿಯಿಂದ ತಪ್ಪಿಸಲುಕೊಳ್ಳಲು ಸಾಧ್ಯ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>ಮುಂದಿನ ಎರಡು ತಿಂಗಳು ಹೆಚ್ಚು ಜಾಗ್ರತೆ ವಹಿಸಿ, ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸ<br />ಬೇಕಾಗಿದೆ.</p>.<p>ಮಹಾರಾಷ್ಟ್ರ ಮತ್ತು ದೆಹಲಿ ಯಲ್ಲಿ ಕೋವಿಡ್ ತಾರಕಕ್ಕೆ ಏರಿದೆ. ಅಲ್ಲಿ ರೀತಿ ಇಲ್ಲಿ ಉಲ್ಬಣ ಆಗಬಾರದು ಎಂದು ಅವರು ತಿಳಿಸಿದರು.</p>.<p class="Subhead"><strong>ಕರ್ಫ್ಯೂ ಸಹಕಾರಿ:</strong> ಮೇ 4 ರವರೆಗಿನ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಬಂದ್ನಿಂದ ಕೊರೊನಾ ಸೋಂಕಿನ ಸರಪಳಿ ಮುರಿಯಲು ಸಾಧ್ಯ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.</p>.<p>ತಾಂತ್ರಿಕ ಸಲಹಾ ಸಮಿತಿಯ ತಜ್ಞರು ವೈಜ್ಞಾನಿಕ ಆಧಾರದ ಮೇಲೆ ನೀಡಿರುವ ಸಲಹೆಗಳ ಮೇರೆಗೆ ಮಾರ್ಗಸೂಚಿ ರೂಪಿಸಲಾಗಿದೆ. ಸಾರ್ವಜನಿಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ, ಮುಂದಿನ ಮೂರು–ನಾಲ್ಕು ದಿನಗಳಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕರ್ಫ್ಯೂ ಅವಧಿಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸದೇ ಇದ್ದರೆ, ಇನ್ನೂ ಕಠಿಣ ನಿಯಮಗಳನ್ನು ಜಾರಿ ಮಾಡುವುದು ಅನಿವಾರ್ಯ ಎಂದು ಕಂದಾಯ ಸಚಿವ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.</p>.<p>ಕೊರೋನಾ ಸೋಂಕಿನ ಸರಪಳಿ ಮುರಿಯಲು ಸಾರ್ವಜನಿಕರು ಮನೆಯಲ್ಲೇ ಇರಬೇಕು. ಅನಿವಾರ್ಯ ಇದ್ದರಷ್ಟೇ ಹೊರಗೆ ಬರಬೇಕು. 14 ದಿನಗಳಲ್ಲಿ ಸೋಂಕು ಸರಪಳಿ ಮುರಿದರೆ ಮುಂದೆ ಕಠಿಣ ಕ್ರಮಗಳ ಜಾರಿಯಿಂದ ತಪ್ಪಿಸಲುಕೊಳ್ಳಲು ಸಾಧ್ಯ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>ಮುಂದಿನ ಎರಡು ತಿಂಗಳು ಹೆಚ್ಚು ಜಾಗ್ರತೆ ವಹಿಸಿ, ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸ<br />ಬೇಕಾಗಿದೆ.</p>.<p>ಮಹಾರಾಷ್ಟ್ರ ಮತ್ತು ದೆಹಲಿ ಯಲ್ಲಿ ಕೋವಿಡ್ ತಾರಕಕ್ಕೆ ಏರಿದೆ. ಅಲ್ಲಿ ರೀತಿ ಇಲ್ಲಿ ಉಲ್ಬಣ ಆಗಬಾರದು ಎಂದು ಅವರು ತಿಳಿಸಿದರು.</p>.<p class="Subhead"><strong>ಕರ್ಫ್ಯೂ ಸಹಕಾರಿ:</strong> ಮೇ 4 ರವರೆಗಿನ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಬಂದ್ನಿಂದ ಕೊರೊನಾ ಸೋಂಕಿನ ಸರಪಳಿ ಮುರಿಯಲು ಸಾಧ್ಯ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.</p>.<p>ತಾಂತ್ರಿಕ ಸಲಹಾ ಸಮಿತಿಯ ತಜ್ಞರು ವೈಜ್ಞಾನಿಕ ಆಧಾರದ ಮೇಲೆ ನೀಡಿರುವ ಸಲಹೆಗಳ ಮೇರೆಗೆ ಮಾರ್ಗಸೂಚಿ ರೂಪಿಸಲಾಗಿದೆ. ಸಾರ್ವಜನಿಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ, ಮುಂದಿನ ಮೂರು–ನಾಲ್ಕು ದಿನಗಳಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>